ಸಂಸದರ ಕಿತ್ತಾಟ: ಸಂಸತ್ತನ್ನು ಬಂಗಾಳ ವಿಧಾನಸಭೆ ಮಾಡ್ಬೇಡಿ, ಸ್ಪೀಕರ್ ಗುಡುಗು!

Published : Jul 04, 2019, 05:30 PM IST
ಸಂಸದರ ಕಿತ್ತಾಟ: ಸಂಸತ್ತನ್ನು ಬಂಗಾಳ ವಿಧಾನಸಭೆ ಮಾಡ್ಬೇಡಿ, ಸ್ಪೀಕರ್ ಗುಡುಗು!

ಸಾರಾಂಶ

ಲೋಕಸಭೆಯಲ್ಲಿ ಗುಣುಗಿದ 'ಕಟ್ ಮನಿ' ಆರೋಪ| ಟಿಎಂಸಿ, ಬಿಜೆಪಿ ನಾಯಕರ ನಡುವೆ ವಾಕ್ಸಮರ| ಉಭಯ ಪಕ್ಷದ ಸಂಸದರನ್ನು ಶಾಂತಗೊಳಿಸಲು ಗುಡುಗಿದ ಸ್ಪೀಕರ್

ನವದೆಹಲಿ[ಜು.04]: ಪಶ್ಚಿಮ ಬಂಗಾಳ ಸರ್ಕಾರದ ಮೇಲಿನ 'ಕಟ್ ಮನಿ' ಆರೋಪ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಉಭಯ ಪಕ್ಷದ ಸಂಸದರನ್ನು ಶಾಂತಗೊಳಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ 'ಲೋಕಸಭೆಯನ್ನು ಬಂಗಾಳ ವಿಧಾನ ಸಭೆಯನ್ನಾಗಿ ಪರಿವರ್ತಿಸಬೇಡಿ' ಎಂದು ಗುಡುಗಿದ ಪ್ರಸಂಗವೂ ನಡೆದಿದೆ.

ಹೌದು ಮಂಗಳವಾರದಂದು ಲೋಕಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಟಿಎಂಸಿ ಕಾರ್ಯಕರ್ತರ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ 'ಹುಟ್ಟಿದಾಗಿನಿಂದ ಸಾಯುವವರೆಗೆ ಎಲ್ಲೆಲ್ಲೂ ಕಟ್ ಮನಿ ಪಡೆಯುತ್ತಿದ್ದಾರೆ' ಎಂದಿದ್ದರು. 

ಈ ವಿಚಾರವನ್ನು ಬುಧವಾರದಂದು ಅಧಿವೇಶನದಲ್ಲಿ ಉಲ್ಲೇಖಿಸಿದ್ದ ಟಿಎಂಸಿ ಪಕ್ಷದ ಸಂಸದ ಸುದೀಪ್ ಬಂಧೋಪಧ್ಯಾಯ 'ಈ ಆರೋಪ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ವಿರುದ್ಧ ಕೇಳಿ ಬಂದಿದೆ. ಆದರೆ ಅವರು ಈ ಸಂಸತ್ತಿನಲ್ಲಿಲ್ಲ. ಹೀಗಾಗಿ ಈ ವಿಚಾರವಾಗಿ ಆದ ಮಾತುಕತೆಯನ್ನು ಸಂಸತ್ತಿನ ದಾಖಲೆಯಿಂದ ಅಳಿಸಿ ಹಾಕಬೇಕು. ಅಲ್ಲದೇ ರಾಜ್ಯ ಸರ್ಕಾರದ ವ್ಯಾಪ್ತಿಗೊಳಪಡುವ ವಿಚಾರಗಳನ್ನು ಇಲ್ಲಿ ಉಲ್ಲೇಖಿಸುವಂತಿಲ್ಲ' ಎಂದಿದ್ದರು.

ಹೀಗಿರುವಾಗ ಈ ಕುರಿತಾಗಿ ಸ್ಪಷ್ಟನೆ ನೀಡಿದ್ದ ಸ್ಪೀಕರ್ ಓಂ ಬಿರ್ಲಾ 'ಈ ವಿಚಾರವನ್ನು ಪರಿಶೀಲಿಸಿ ನಾನು ಪ್ರತಿಕ್ರಿಯಿಸುತ್ತೇನೆ' ಎಂದಿದ್ದರು. ಹೀಗಿದ್ದರೂ ಉಭಯ ಪಕ್ಷದ ಸಂಸದರ ನಡುವೆ ವಾಕ್ಸಮರ ಮುಂದುವರೆದಿತ್ತು. ಲೋಕಸಭಾ ಸ್ಪೀಕರ್ ಪರಿಸ್ಥಿತಿ ಶಾಂತಗೊಳಿಸಲು ಯತ್ನಿಸಿದ್ದರಾದರೂ ಯಾರೂ ಸುಮ್ಮನಾಗಲಿಲ್ಲ. ಹೀಗಾಗಿ ಅಂತಿಮವಾಗಿ 'ಸಂಸತ್ತನ್ನು ಬಂಗಾಳ ವಿಧಾನಸಭೆಯನ್ನಾಗಿಸಬೇಡಿ' ಎಂದು ಗುಡುಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!
ಸೊಗಸಾದ ಬಜೆಟ್‌ ಫ್ರೆಂಡ್ಲಿ ಸ್ಮಾರ್ಟ್‌ಫೋನು ಬೇಕಾ? ಇಲ್ಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ17 5ಜಿ!