‘ಸೀತಾಮಾತೆ ಬಿಜೆಪಿಯ ರಾಜಕೀಯ ಬಲಿಪಶು’: ಕಾಂಗ್ರೆಸ್

Published : Jun 02, 2018, 02:48 PM IST
‘ಸೀತಾಮಾತೆ ಬಿಜೆಪಿಯ ರಾಜಕೀಯ ಬಲಿಪಶು’: ಕಾಂಗ್ರೆಸ್

ಸಾರಾಂಶ

ಸೀತಾಮಾತೆಯ ಕುರಿತು ಯುಪಿ ಡಿಸಿಎಂ ದಿನೇಶ್ ಶರ್ಮ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ನಿಮ್ಮ ಕೀಳು ರಾಜಕೀಯಕ್ಕಾಗಿ ಸೀತಾಮಾತೆಯ ಹೆಸರಿಗೆ ಮಸಿ ಬಳಿಯಬೇಡಿ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದೆ.

ನವದೆಹಲಿ(ಜೂ.2): ಸೀತಾಮಾತೆಯ ಕುರಿತು ಯುಪಿ ಡಿಸಿಎಂ ದಿನೇಶ್ ಶರ್ಮ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ನಿಮ್ಮ ಕೀಳು ರಾಜಕೀಯಕ್ಕಾಗಿ ಸೀತಾಮಾತೆಯ ಹೆಸರಿಗೆ ಮಸಿ ಬಳಿಯಬೇಡಿ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದೆ.

ರಾಮಾಯಣ ಕಾಲದಲ್ಲೇ ಪ್ರಣಾಳ ಶಿಶು ತಂತ್ರಜ್ಞಾನ ಚಾಲ್ತಿಯಲ್ಲಿದ್ದು, ಸೀತಾಮಾತೆ ಟೆಸ್ಟ್ ಟ್ಯೂಬ್ ಬೇಬಿಯಾಗಿದ್ದಳು ಎಂದು ದಿನೇಶ್ ಶರ್ಮ ಹೇಳಿಕೆ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ, ಬಿಜೆಪಿ ಸೀತಾಮಾತೆಯನ್ನು ತಮ್ಮ ರಾಜಕೀಯ ಬಲಿಪಶುವನ್ನಾಗಿ ಪರಿವರ್ತಿಸಿದೆ ಎಂದು ಆರೋಪಿಸಿದ್ದಾರೆ.

ಸೀತಾಮಾತೆ ಕುರಿತಾಗಿ ಕೀಳಾಗಿ ಮಾತನಾಡುತ್ತಿರುವ ಇದೇ ಬಿಜೆಪಿ, ಸಂಸತ್ತಿನಲ್ಲಿ ಆಕೆಯ ಕುರಿತು ಕೇಳಲಾದ ಪ್ರಶ್ನೆಗೆ ಸೀತೆಯ ಅಸ್ತಿತ್ವವನ್ನೇ ಅಲ್ಲಗಳೆದಿತ್ತು ಎಂದು ಸುರ್ಜೆವಾಲಾ ನೆನಪಿಸಿದ್ದಾರೆ. ಸೀತೆಯನ್ನು ಟೆಸ್ಟ್ ಟ್ಯೂಬ್ ಬೇಬಿ ಎಂದು ಕರೆದು ಜನರ ಭಾವನೆಗಳಿಗೆ ಬಿಜೆಪಿ ನಾಯಕರು ಧಕ್ಕೆ ತಂದಿದ್ದಾರೆ ಎಂದು ಅವರು ಹರಿಹಾಯ್ದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ