
ರಾಂಚಿ[ಜು.17]: ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮರನ್ನು ಅವಹೇಳನ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 19 ವರ್ಷದ ಯುವತಿಯೊಬ್ಬಳಿಗೆ ಸ್ಥಳೀಯ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. ಆದರೆ ಜಾಮೀನು ನೀಡುವುದಕ್ಕೂ ಮುನ್ನ, ಕುರಾನ್ನ 5 ಪ್ರತಿಗಳನ್ನು ಆಕೆ ಉಚಿತವಾಗಿ ಹಂಚಬೇಕು ಎಂದು ಷರತ್ತು ಒಡ್ಡಿದೆ.
ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಸ್ಥಳೀಯ ಅಂಜುಮನ್ ಸಮಿತಿ ಸೇರಿದಂತೆ 5 ಜನರಿಗೆ ಬಂಧಿತೆ ರಿಚಾ ಭಾರತಿ ಕುರಾನ್ನ ಪ್ರತಿ ಹಂಚಬೇಕು ಎಂದು ನ್ಯಾಯಾಧೀಶ ಮನೀಶ್ ಕುಮಾರ್ ಸಿಂಗ್ ಷರತ್ತು ಒಡ್ಡಿದ್ದಾರೆ.
ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಮಾತನಾಡಿದ ರಿಚಾ, ಇಂದು ಕುರಾನ್ ಹಂಚಲು ಹೇಳುತ್ತಾರೆ, ನಾಳೆ ಇಸ್ಲಾಂ ಸೇರುವಂತೆ ನ್ಯಾಯಾಧೀಶರು ಸೂಚಿಸುತ್ತಾರೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.