'ನಾನು ರೋಡು ಮಿನಿಸ್ಟ್ರು ನೀರಿನ ವಿಚಾರ ಕೇಳ್ಬೇಡಿ'

Published : Jun 30, 2019, 01:36 PM IST
'ನಾನು ರೋಡು ಮಿನಿಸ್ಟ್ರು ನೀರಿನ ವಿಚಾರ ಕೇಳ್ಬೇಡಿ'

ಸಾರಾಂಶ

ನೀರಿನ ವಿಚಾರವಾಗಿ ಎತ್ತಿದ ಪ್ರಶ್ನೆಗೆ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಉತ್ತರ ನೀಡಿದ್ದಾರೆ. 

ಮೈಸೂರು/ಮಂಡ್ಯ [ಜೂ.30] :  ‘ನೀರಿನ ವಿಚಾರ ನನ್ನನ್ನು ಕೇಳಬೇಡಿ, ನಾನು ರೋಡ್‌ ಮಿನಿಸ್ಟ್ರು, ನೀರಿನ ವಿಚಾರವನ್ನು ನೀರಾವರಿ ಸಚಿವರೇ ಮಾತನಾಡಬೇಕು.’

- ಕಾವೇರಿ ನೀರಿನ ವಿಚಾರವಾಗಿ ಸಚಿವ ಎಚ್‌.ಡಿ.ರೇವಣ್ಣ ಉತ್ತರಿಸಿದ್ದು ಹೀಗೆ. ಮೈಸೂರು ಮತ್ತು ಮಂಡ್ಯಗಳಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅಣೆಕಟ್ಟೆಯಿಂದ ಒಂದು ಹನಿ ನೀರು ಹೋದರೂ ಎಲ್ಲರಿಗೂ ನೋಟಿಸ್‌ ಬರುತ್ತದೆ, ನೀರಿನ ವಿಚಾರ, ಮತ್ತೊಂದು ವಿಚಾರ ನನ್ನ ಬಳಿ ಕೇಳಬೇಡಿ. ಅದಕ್ಕಾಗಿಯೇ ಜಲ ಸಂಪನ್ಮೂಲ ಸಚಿವರು ಇದ್ದಾರೆ. ಆ ಸಮಸ್ಯೆಗಳನ್ನು ಅವರೇ ಬಗೆಹರಿಸಿಕೊಳ್ಳುತ್ತಾರೆ. ನಾನು ರೋಡ್‌ ಮಿನಿಸ್ಟು್ರ, ಅದಕ್ಕೆ ಮಾತ್ರ ನಾನು ಉತ್ತರಿಸುತ್ತೇನೆ ಎಂದರು.

ನಾಲೆಗಳಿಗೆ ನೀರು ಬಿಡುವಂತೆ ನಡೆಯುತ್ತಿರುವ ಪ್ರತಿಭಟನೆಯ ವಿಷಯದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ನೀರು ಬಿಡುವ ಅಧಿಕಾರ ನಮ್ಮ ಕೈಯಲ್ಲಿ ಇದೆಯೇ ಹೊರತು ಸೋತಿರುವ ದೇವೇಗೌಡರ ಕೈಯಲ್ಲಿದೆಯೇ ಎಂದು ಪ್ರಶ್ನಿಸಿದರು.

ತಮಿಳುನಾಡಿನಿಂದ ವಾಸ್ತವಾಂಶ ಸಂಗ್ರಹ

ನೆರೆಯ ತಮಿಳುನಾಡು ಅಧಿಕಾರಿಗಳು ಕೆಆರ್‌ಎಸ್‌, ಕಬಿನಿ, ಹಾರಂಗಿ, ಯಗಚಿ ಮತ್ತು ಹೇಮಾವತಿ ನದಿಗಳ ನೀರಿನ ವಾಸ್ತವ ಅಂಶಗಳನ್ನು ರಾಜ್ಯಸರ್ಕಾರದ ಗಮನಕ್ಕೆ ಬಾರದಂತೆ ಸಂಗ್ರಹ ಮಾಡುತ್ತಿದ್ದಾರೆ. ಈ ಹಂತದಲ್ಲಿ ಸರ್ಕಾರ ಏನು ತಾನೆ ಮಾಡಲು ಸಾಧ್ಯ? ಆದರೂ ಹಾಸನ ಸಂಸದ ಪ್ರಜ್ವಲ್‌ ಕಾವೇರಿ ವಿಚಾರವಾಗಿ ಲೋಕಸಭೆಯಲ್ಲಿ ದನಿ ಎತ್ತಿದ್ದು, 2 ಟಿಎಂಸಿ ನೀರನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?