
ನವದೆಹಲಿ : ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಮುಂದಿನ ಚುನಾವಣೆಯಲ್ಲಿ ಯಾರೂ ಕೂಡ ಕ್ಷಮಿಸಬಾರದು ಎಂದು ಹೇಳಿದ್ದಾರೆ.
2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಜನ ಕ್ಷಮಿಸುವುದಿಲ್ಲ. ಅವರ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರುವುದು ಸಾಧ್ಯವಿಲ್ಲ. ಎಂದು ಯಶವಂತ್ ಸಿನ್ಹಾ ಹೇಳಿದ್ದಾರೆ.
ಗುಜರಾತ್ ನ ಜುನಾಗಡ್ ವಂತಾಲಿ ಪ್ರದೇಶದಲ್ಲಿ ನಡೆದ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು ಈ ರೀತಿಯಾಗಿ ಹೇಳಿದ್ದಾರೆ.
ಈ ಸರ್ಕಾರ ಜನರ ಬೇಡಿಕೆಗಳನ್ನು, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಈ ಸರ್ಕಾರ ಅವಧಿಯಲ್ಲಿ ಎಲ್ಲರೂ ಕೂಡ ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ಒಂದೇ ಪರಿಹಾರ ಎಂದರೆ ಮುಂದಿನ ಚುನಾವಣೆಯಲ್ಲಿ ಈ ಸರ್ಕಾರವನ್ನು ಬೇರು ಸಹಿತ ಕಿತ್ತು ಹಾಕುವುದೇ ಎಂದು ಹೇಳಿದ್ದಾರೆ.
ನಾನು ಜನರಲ್ಲಿ ಕ್ಷಮೆ ಕೇಳುತ್ತೇನೆ. ಯಾಕೆಂದರೆ ಇಂತಹ ಭರವಸೆಗಳನ್ನು ನೀಡುವ ವೇಳೆ ನಾನು ಕೂಡ ಪಕ್ಷದ ಭಾಗವಾಗಿದ್ದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.