
ನವದೆಹಲಿ: ಇಂಧನ ಸಚಿವ ಡಿ,ಕೆ. ಶಿವಕುಮಾರ್ ನಿವಾಸದ ಮೇಲಿನ ದಾಳಿ ರಾಜಕೀಯ ಪ್ರೇರಿತ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅಲ್ಲಗಳೆದಿದ್ದಾರೆ.
ಗುಜರಾತ್ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಸೇಡು ತೀರಿಸಲು ಬಿಜೆಪಿಯು ಡಿ,ಕೆ. ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಇಂದು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದೆ.
ಈ ವಿಚಾರವಾಗಿ ಸಂಸತ್ತಿನ ಕೆಳಮನೆ ಹಾಗೂ ಮೇಲ್ಮನೆಯಲ್ಲಿ ಮಾತನಾಡಿದ ಜೇಟ್ಲಿ, ಐಟಿ ದಾಳಿಗಳ ಹಿಂದೆ ರಾಜಕೀಯ ದುರುದ್ಧೇಶವಿಲ್ಲವೆಂದು ಹೇಳಿದ್ದಾರೆ.
ಆದಾಯ ತೆರಿಗೆ ಇಲಾಖೆ ಏನೆಲ್ಲಾ ವಶಪಡಿಸುತ್ತದೋ ಅವುಗಳಿಂದ ಸರ್ಕಾರ ಅಧಿಕಾರದ ಬಳಕೆ ಮಾಡುತ್ತಿದೆಯೋ ಅಥವಾ ದುರ್ಬಳಕೆ ಮಾಡುತ್ತಿದೆಯೋ ಎಂಬುವುದು ತಿಳಿಯುವುದು ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ಶಿವಕುಮಾರ್ ನಿವಾಸ ಹಾಗೂ ಇನ್ನಿತರ ಕಡೆ ದಾಳಿಯು ಪೂರ್ವನಿಯೋಜಿತವಾಗಿತ್ತು ಎಂದು ಐಟಿ ಇಲಾಖೆಯು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.