
ನವದೆಹಲಿ (ಜ.08): ನಷ್ಟದ ಸುಳಿಯಲ್ಲಿರುವ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾದ ಖಾಸಗೀಕರಣ ಅಥವಾ ಬಂಡವಾಳ ಹಿಂತೆಗೆತದ ಸರ್ಕಾರದ ಕನಸಿಗೆ ಸಂಸದೀಯ ಸ್ಥಾಯಿ ಸಮಿತಿ ವಿರೋಧ ವ್ಯಕ್ತಪಡಿಸಿದೆ. ನಷ್ಟದ ಸುಳಿಗೆ ಸಿಲುಕಿದೆ ಎಂಬ ಕಾರಣಕ್ಕೆ ಪ್ರತಿಷ್ಠೆಯಾದ ರಾಷ್ಟ್ರೀಯ ವಿಮಾನಯಾನವನ್ನು ಈಗ ಕೈಬಿಡುವುದು ಸಮಂಜಸ ನಿರ್ಧಾರವಲ್ಲ.
ಸಂಸ್ಥೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಹಕಾರಿಯಾಗುವಂತೆ ಏರ್ ಇಂಡಿಯಾದ ಸಾಲ ಮನ್ನಾ ಮಾಡ ಬೇಕು. ಜತೆಗೆ, ಅದರ ಪುನಶ್ಚೇತನಕ್ಕಾಗಿ 5 ವರ್ಷ ಗಳ ಕಾಲಾವಕಾಶ ನೀಡಬೇಕು ಎಂದು ಸಂಸದೀಯ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.