'ನಿಮ್ಮಿಂದ ದೇಶಭಕ್ತಿಯ ಪಾಠ ಕಲಿಯುವ ಅಗತ್ಯವಿಲ್ಲ'; ಬಿಜೆಪಿಗೆ ಠಾಕ್ರೆ ಟಾಂಗ್

Published : Sep 30, 2017, 10:07 PM ISTUpdated : Apr 11, 2018, 01:02 PM IST
'ನಿಮ್ಮಿಂದ ದೇಶಭಕ್ತಿಯ ಪಾಠ ಕಲಿಯುವ ಅಗತ್ಯವಿಲ್ಲ'; ಬಿಜೆಪಿಗೆ ಠಾಕ್ರೆ ಟಾಂಗ್

ಸಾರಾಂಶ

ಶಿವಸೇನೆ ಹಾಗೂ ಬಿಜೆಪಿ ನಡುವಿನ ಭಿನ್ನಾಭಿಪ್ರಾಯ ಅಂತ್ಯವಾಗುವ ಬದಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಮಗೆ ದೇಶಭಕ್ತಿಯ ಪಾಠವನ್ನು ನೀವು ಕಲಿಸಿಕೊಡುವುದು ಬೇಡ ಎಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ.

ನವದೆಹಲಿ (ಸೆ.30): ಶಿವಸೇನೆ ಹಾಗೂ ಬಿಜೆಪಿ ನಡುವಿನ ಭಿನ್ನಾಭಿಪ್ರಾಯ ಅಂತ್ಯವಾಗುವ ಬದಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಮಗೆ ದೇಶಭಕ್ತಿಯ ಪಾಠವನ್ನು ನೀವು ಕಲಿಸಿಕೊಡುವುದು ಬೇಡ ಎಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ.

ನೀವು ನಮಗೆ ದೇಶಭಕ್ತಿ, ದೇಶಪ್ರೇಮದ ಪಾಠವನ್ನು ಹೇಳಿಕೊಡುವುದು ಬೇಡ. ಅದನ್ನು ನಿಮ್ಮಿಂದ ಕಲಿಯುವ ದಿನವಿನ್ನೂ ಬಂದಿಲ್ಲ. ಡಿಮಾನಿಟೈಸೇಶನ್’ನನ್ನು ಬೆಂಬಲಿಸಿದವರು ದೇಶಪ್ರೇಮಿಗಳು, ಅದನ್ನು ವಿರೋಧಿಸಿದವರೆಲ್ಲಾ ದೇಶದ್ರೋಹಿಗಳು ಎನ್ನುವ ವಾತಾವರಣ ನಿರ್ಮಾಣವಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಹಿಂದುತ್ವಕ್ಕೋಸ್ಕರ ನಾವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು. ನಾವು ಅವರಿಗೆ ಪ್ರಯೋಜನಕ್ಕೆ ಬಾರದವರು ಎಂದು ಬಿಜೆಪಿ ನಾಯಕರಿಗೆ ಅನ್ನಿಸಿದರೆ ನಾವು ಮುಂದಿನ ಹೆಜ್ಜೆಯ ಬಗ್ಗೆ ಯೋಚಿಸುತ್ತೇವೆ ಎಂದು ಠಾಕ್ರೆ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್
ಕನ್ನಡದ 'ತ್ರಿಮೂರ್ತಿ'ಗಳ ಸಂಗಮಕ್ಕೆ ಸಾಕ್ಷಿಯಾಗಲಿದ್ದಾರೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್