ರೈತರ ಆದಾಯ ದ್ವಿಗುಣ ಶಿಫಾರಸು : ಇಂದು ಪ್ರಧಾನಿ ಮೋದಿಗೆ ಸಲ್ಲಿಕೆ

Published : Feb 20, 2018, 08:09 AM ISTUpdated : Apr 11, 2018, 01:01 PM IST
ರೈತರ ಆದಾಯ ದ್ವಿಗುಣ ಶಿಫಾರಸು : ಇಂದು ಪ್ರಧಾನಿ ಮೋದಿಗೆ ಸಲ್ಲಿಕೆ

ಸಾರಾಂಶ

2022ರೊಳಗೆ ರೈತರ ಆದಾಯ ದ್ವಿಗುಣಗೊಳಿಸಲು ಕೈಗೊಳ್ಳಬೇಕಾದ ಪ್ರಾಯೋಗಿಕ ಪರಿಹಾರಗಳ ಕುರಿತಂತೆ ಕೃಷಿ ತಜ್ಞರು ಮತ್ತು ಸಂಬಂಧಪಟ್ಟವರೊಂದಿಗೆ ಸರ್ಕಾರ ಸೋಮವಾರ ಚರ್ಚೆ ನಡೆಸಿದೆ.

ನವದೆಹಲಿ: 2022ರೊಳಗೆ ರೈತರ ಆದಾಯ ದ್ವಿಗುಣಗೊಳಿಸಲು ಕೈಗೊಳ್ಳಬೇಕಾದ ಪ್ರಾಯೋಗಿಕ ಪರಿಹಾರಗಳ ಕುರಿತಂತೆ ಕೃಷಿ ತಜ್ಞರು ಮತ್ತು ಸಂಬಂಧಪಟ್ಟವರೊಂದಿಗೆ ಸರ್ಕಾರ ಸೋಮವಾರ ಚರ್ಚೆ ನಡೆಸಿದೆ.

ಈ ಕುರಿತ ವರದಿಯನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮುಂದೆ ಸಲ್ಲಿಸಲಾಗುತ್ತದೆ. ಕೃಷಿ ಸಚಿವಾಲಯ ಆಯೋಜಿಸಿದ್ದ ಎರಡು ದಿನಗಳ ರಾಷ್ಟ್ರೀಯ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಕೃಷಿಕರ ಸಮಸ್ಯೆಗಳನ್ನು ಉಲ್ಲೇಖಿಸಿ ಮಾತನಾಡಲಿದ್ದಾರೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಅಂತರ್‌ ಸಚಿವಾಲಯ ಸಮಿತಿಯ ಶಿಫಾರಸುಗಳು ಸಹಾಯಕವಾಗಲಿವೆ. ಸೋಮವಾರ ಈ ಸಮಾವೇಶವನ್ನು ಕೃಷಿ ಸಚಿವ ರಾಧಾ ಮೋಹನ್‌ ಸಿಂಗ್‌ ಉದ್ಘಾಟಿಸಿದ್ದಾರೆ.

2018-19ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಕೃಷಿ ವಲಯದಲ್ಲಿ ಕೇಂದ್ರ ಸರ್ಕಾರ 58,080 ಕೋಟಿ ರು. ಮೀಸಲಿರಿಸಿದೆ. ಕಳೆದ ಬಜೆಟ್‌ನಲ್ಲಿ ಅದು 51,576 ಕೋಟಿ ರು. ಆಗಿತ್ತು. ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟುಅನುದಾನ ದೊರೆಯುವಂತೆ ಮಾಡಲಾಗಿದೆ.

ಏಳು ವಿಷಯಗಳನ್ನಾಧರಿಸಿ ಸಮಾವೇಶ ನಡೆಯುತ್ತಿದೆ. ಹಿಮಾಚಲ ಪ್ರದೇಶ ರಾಜ್ಯಪಾಲ ಆಚಾರ್ಯ ದೇವವೃತ, ಸಹಾಯಕ ಕೃಷಿ ಸಚಿವ ಪರ್ಷೋತ್ತಮ್‌ ರುಪಾಲ, ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್‌ ಕುಮಾರ್‌, ಕೃಷಿ ಕಾರ್ಯದರ್ಶಿ ಎಸ್‌.ಕೆ. ಪಟ್ಟನಾಯಕ್‌ ಉಪಸ್ಥಿತರಿದ್ದರು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂತರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡದ ಡಿಂಡಿಮ: ವಿದೇಶಿ ಕಲಾಪ್ರೇಮಿಗಳ ಮನಗೆದ್ದ ಈ ಕನ್ನಡ ಕ್ಯಾಲಿಗ್ರಫಿ ಸಾಧಕ ಯಾರು?
ಹುಬ್ಬಳ್ಳಿಯಲ್ಲಿ ಕಿಚ್ಚ ಸುದೀಪ್ ಆಡಿರೋ ಮಾತು ಯಾರ ವಿರುದ್ಧ? ವಿಜಯಲಕ್ಷ್ಮೀ ದರ್ಶನ್ ಮಾತಿನ ಮರ್ಮವೇನು?