
ಬೆಂಗಳೂರು : ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನು ಸಭಾಪತಿ ಶಂಕರಮೂರ್ತಿ ನಿರಾಕರಿಸಿದ್ದಾರೆ.
ಯಾವುದೇ ವ್ಯಕ್ತಿ ಶಾಸಕರಾಗಿ ಆಯ್ಕೆಯಾಗುತ್ತಿದ್ದಂತೆ ಪರಿಷತ್ ಸದಸ್ಯತ್ವ ರದ್ದಾಗುತ್ತದೆ. ಇದಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.
ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸಭಾಪತಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಪರಮೇಶ್ವರ್ ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.
25ನೇ ಮುಖ್ಯಮಂತ್ರಿಯಾಗಿ ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ ವೇಳೆಯೇ ರಾಜ್ಯದ 9ನೇ ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.