
ಕೊಪ್ಪಳ(ಮಾ.24): ವಾಹನ ಚಾಲನೆ ಮಾಡುತ್ತಿದ್ದಾಗಲೆ ಬಸ್ ಚಾಲಕನಿಗೆ ಬಸ್ ಚಾಲಕನಿಗೆ ಹೃದಯಾಘಾತವಾಗಿ ಮರಳಿನ ಎತ್ತಿನ ಬಂಡಿ ಹಾಗೂ ಟೋಲ್'ಗೇಟ್'ಗೆ ಡಿಕ್ಕಿ ಹೊಡೆದ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನ ಮರಳಿ ಗ್ರಾಮದ ಬಳಿ ನಡೆದಿದೆ.
ಅಪಘಾತದಿಂದ ಜಂಗಮರಕಲ್ಗುಡಿ ಗ್ರಾಮದ ಸುರೇಶ, ಯಮನೂರಪ್ಪ,ಯಮನೂರ ಎಂಬುವವರ ಸ್ಥಿತಿ ಗಂಭೀರವಾಗಿದ್ದು ಟಫಲ್'ಗೇಟ್ ಹಾಗೂ ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಬಸ್ ಚಾಲಕ ಸೇರಿದಂತೆ ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಕನೂರುನಿಂದ ಮಂತ್ರಲಾಯಕ್ಕೆ ಬಸ್ ತೆರಳುತ್ತಿತ್ತು. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.