
ಇಂದೋರ್: ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಮಧ್ಯಪ್ರದೇಶದ ಜಿಲ್ಲಾಡಳಿತವೊಂದು ಹೊಸ ಯೋಜನೆ ಪ್ರಸ್ತಾಪಿಸಿದೆ.
ಮಹಿಳೆ ಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪದೇ ಪದೇ ಆರೋಪಿತರಾಗಿದ್ದಲ್ಲಿ ಇಲ್ಲವೇ ದೋಷಿ ಎಂದು ಘೋಷಿತನಾದಲ್ಲಿ, ಅಂತಹವರ ಡ್ರೈವಿಂಗ್ ಪರವಾನಗಿ ರದ್ದು ಪಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಮಹಿಳೆಯರನ್ನು ಚುಡಾಯಿಸುವುದು, ಅತ್ಯಾಚಾರ, ವರದಕ್ಷಿಣೆ ಕಿರುಕುಳ ಮುಂತಾದ ಪ್ರಕರಣಗಳಲ್ಲಿ ದೋಷಾರೋಪ ಪದೇ ಪದೇ ದಾಖಲಾದಾಗ ಅಥವಾ ದೋಷಿಯಾದಾಗ ಅಂತಹವರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ದೋಷಾರೋಪ ದಾಖಲಾಗಿದ್ದವರ ಆರೋಪ ಸಾಬೀತಾಗದಿದ್ದಲ್ಲಿ ಪರವಾನಗಿ ಹಿಂದಿರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿಶಾಂತ್ ವರ್ವಾಡೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.