
ಗುರುಗ್ರಾಮ : ಕುಡುಕ ವ್ಯಕ್ತಿಯೋರ್ವ ಟ್ರಾಫಿಕ್ ಪೊಲೀಸ್ ಮೇಲೆ ಕಾರನ್ನು ಹರಿಸಿ 200 ಮೀಟರ್ ವರೆಗೆ ಎಳೆದೊಯ್ದ ದುರ್ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಮಿಲ್ಲೇನಿಯಮ್ ಸಿಟಿ ಬಳಿಯಲ್ಲಿ ಘಟನೆ ನಡೆದಿದ್ದು, ರಾಂಗ್ ಸೈಡ್ ನಲ್ಲಿ ಗಾಡಿ ಚಲಾಯಿಸಿಕೊಂಡು ವ್ಯಕ್ತಿ ಬರುತ್ತಿದ್ದ ವೇಳೆ ಆತನನ್ನು ತಡೆಯಲು ಯತ್ನಿಸಿದ ಟ್ರಾಫಿಕ್ ಪೊಲೀಸ್ ಮೇಲೆ ಕಾರು ಹರಿದಿದೆ.
ಕುಡುಕ ಚಾಲಕನ ಕಾರಿಗೆ ಪೊಲೀಸ್ ಸಿಲುಕಿ 200 ಮೀಟರ್ ವರೆಗೆ ಎಳೆದೊಯ್ದಿದ್ದಾನೆ.
ಪ್ರಕರಣ ಸಂಬಂಧ ಕಾರು ಚಾಲಕನನ್ನು ಬಂಧಿಸಲಾಗಿದ್ದು, ಆತ ದಿಲ್ಲಿ ನಿವಾಸಿಯೆಂದು ತಿಳಿದು ಬಂದಿದೆ. ಸದ್ಯ ಗುರುಗ್ರಾಮ್ ಸೆಕ್ಟರ್ 29 ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.