
ವಿಜಯಪುರ (ಜೂ. 06): ಕುಡಿದ ಅಮಲಿನಲ್ಲಿ ವಿದ್ಯಾರ್ಥಿಗೆ ಮನಬಂದತೆ ಸಹ ಶಿಕ್ಷಕರೊಬ್ಬರು ಮನಬಂದಂತೆ ಥಳಿಸಿರುವ ಘಟನೆ ಸಿಂಧಗಿ ತಾಲೂಕಿನ ಮೊರಟಗಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಥಳಿತಕ್ಕೊಳಗಾದ ವಿದ್ಯಾರ್ಥಿ ಕಣ್ಣಿಗೆ ತೀವ್ರ ಪೆಟ್ಟು ಬಿದ್ದಿದೆ.
4 ನೇ ತರಗತಿಯಲ್ಲಿ ಓದುತ್ತಿದ್ದ ನಿಂಗಪ್ಪ ಕಕ್ಕಳ ಥಳಿತಕ್ಕೊಳಗಾದ ವಿದ್ಯಾರ್ಥಿ. ಕಾಟಾಚಾರಕ್ಕೆ ಸರ್ಕಾರಿ ಆಸ್ಪತ್ರೆಯಲ್ಲಿ ತೋರಿಸಿ ಕೈ ತೊಳೆದುಕೊಂಡಿದ್ದಾರೆ ಶಿಕ್ಷಕ. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದ್ಯೂಯುವಂತೆ ವೈದ್ಯರಿಂದ ಸಲಹೆ ನೀಡಿದ್ದಾರೆ. ಆದರೆ ಮಾನವೀಯತೆ ಮರೆತು ವಿದ್ಯಾರ್ಥಿಯನ್ನು ಮಾರ್ಗಮಧ್ಯದಲ್ಲಿ ಬಿಟ್ಟು ಹೋಗಿದ್ದಾರೆ.
ಮಗನ ಕಣ್ಣು ಹೋಗಿದೆ. ತಮ್ಮ ಮಗನ ದುಸ್ಥಿತಿಗೆ ನಗನೂರ ಶಿಕ್ಷಕನೇ ಕಾರಣವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕನ ಅಮಾನವಿಯ ಕೃತ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.