ಕಾಮಿಡಿ ನೈಟ್ ವಿಥ್ ಕುಡುಕರು: ಹಲಸೂರು ಪೊಲೀಸರಿಗೆ ಕುಡುಕರ ಕಿರಿಕ್

Published : Oct 07, 2017, 08:56 AM ISTUpdated : Apr 11, 2018, 12:49 PM IST
ಕಾಮಿಡಿ ನೈಟ್ ವಿಥ್ ಕುಡುಕರು: ಹಲಸೂರು ಪೊಲೀಸರಿಗೆ ಕುಡುಕರ ಕಿರಿಕ್

ಸಾರಾಂಶ

ಹಲಸೂರು ಗೇಟ್ ಸಂಚಾರಿ ಪೊಲೀಸರಿಗೊಂದು ಕಾಮಿಡಿ ನೈಟ್ ಕಾದಿತ್ತು. ಇನ್ಸ್ 'ಪೆಕ್ಟರ್ ಮುಹಮ್ಮದ್ ಅಲಿಯವರು ತಮ್ಮ ಸಿಬ್ಬಂದಿ ಸಹಿತ ಕಾರ್ಪೊರೇಶನ್ ಸರ್ಕಲ್ ಬಳಿ ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಟೈಟ್ ಕುಡುಕರಿಬ್ಬರು ಇನ್ಸ್ ಪೆಕ್ಟರ್ ಅವರನ್ನೇ ತಳ್ಳಾಡಿ ಗಲಾಟೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ.

ಬೆಂಗಳೂರು(ಅ.07): ಹಲಸೂರು ಗೇಟ್ ಸಂಚಾರಿ ಪೊಲೀಸರಿಗೊಂದು ಕಾಮಿಡಿ ನೈಟ್ ಕಾದಿತ್ತು. ಇನ್ಸ್ 'ಪೆಕ್ಟರ್ ಮುಹಮ್ಮದ್ ಅಲಿಯವರು ತಮ್ಮ ಸಿಬ್ಬಂದಿ ಸಹಿತ ಕಾರ್ಪೊರೇಶನ್ ಸರ್ಕಲ್ ಬಳಿ ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಟೈಟ್ ಕುಡುಕರಿಬ್ಬರು ಇನ್ಸ್ ಪೆಕ್ಟರ್ ಅವರನ್ನೇ ತಳ್ಳಾಡಿ ಗಲಾಟೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ.

ನಾಗರಭಾವಿ ನಿವಾಸಿಗಳಾದ ವಿಜಯ್ ಕುಮಾರ್ ಮತ್ತು ಲೋಕೇಶ್ ಎಂಬವರೇ ಕಾಮಿಡಿ ಕುಡುಕರು. ರಾತ್ರಿ ಎಂ.ಜಿ.ರೋಡ್ ನಿಂದ ಪಾರ್ಟಿ ಮುಗಿಸಿ ಗಡದ್ದಾಗಿ ಕುಡಿದು ಬಂದ ಇಬ್ಬರು ಡ್ರಿಂಕ್ ಆ್ಯಂಡ್ ಡ್ರೈವ್ ಪರಿಶೀಲಿಸುವ ಯಂತ್ರಕ್ಕೆ ಊದಿ ಎಂದರೆ ಊದದೇ ಜನಪ್ರತಿನಿಧಿಗಳನ್ನೇ ತಮ್ಮ ಬಾಯಿಯ ಅಂಚಿನಲ್ಲೇ ಕರೆದು ಗುಡ್ಡೆ ಹಾಕಿ ಬಿಟ್ಟಿದ್ದರು.

ಸುತ್ತ ನೆರೆದವರಿಗಿದೊಂದು ಮನೋರಂಜನೆಯಾಗಿ ಕಾಣುತ್ತಿತ್ತು. ನಂತರ ಕುಡುಕರ ಉಪಟಳ ಜಾಸ್ತಿಯಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಹಲಸೂರು ಗೇಟ್ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ರಾಂಗ್‌ ಫ್ಲೈಟ್‌ ಹತ್ತಿದ್ದಾರೆ: ಸಿದ್ಧರಾಮಯ್ಯ ವಿರುದ್ಧ ಆರ್‌.ಅಶೋಕ್‌ ಗರಂ!
ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ: ಡಿ.ಕೆ.ಶಿವಕುಮಾರ್ ಹೇಳಿಕೆ ಹಾಟ್ ಟಾಪಿಕ್!