
ಬೆಂಗಳೂರು (ಮೇ.22): ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಸುಳಿವು ನೀಡಿದ ಬೆನ್ನಲ್ಲೇ ತಲೈವಾಗೆ ಬೆದರಿಕೆ ನೀಡಿದ್ದಾರೆ. ತಮಿಳು ಮುನೇತ್ರ ಸಂಘಟನೆಗಳು ರಜನಿ ರಾಜಕೀಯ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿವೆ. ರಜನಿ ರಾಜಕೀಯ ಪ್ರವೇಶ ಖಂಡಿಸಿ ರಜನಿಗೆ ತಮಿಳು ಸ್ಥಳೀಯ ಬೆದರಿಕೆಯ ಕರೆಗಳು ಬರುತ್ತಿವೆ. ಹಿನ್ನೆಲೆಯಲ್ಲಿ ರಜನಿಕಾಂತ್ ಚೆನ್ನೈ ನಿವಾಸಕ್ಕೆ ಭದ್ರೆತೆಯನ್ನ ಒದಗಿಸಲಾಗಿದೆ.
ತಲೈವಾ ರಜನಿಕಾಂತ್ ರಾಜಕೀಯ ಎಂಟ್ರಿ ಬಗ್ಗೆ ಇಡೀ ದೇಶದಲ್ಲಿಯೇ ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಎಲ್ಲರೂ ರಜನಿ ರಾಜಕೀಯಕ್ಕೆ ನಿಜವಾಗಿಯೂ ಬರುತ್ತಾರಾ ಎನ್ನುವ ಕುತೂಹಲದಲ್ಲಿ ಕಾಯುತ್ತಿದ್ದಾರೆ. ಆದರೆ ಯಾವಾಗ ರಜನಿ ರಾಜಕೀಯ ಬರುವ ಸೂಚನೆಗಳನ್ನ ನೀಡಿದ್ರೋ ಆಗ ಅವರ ರಾಜಕೀಯ ವಿರೋಧಿ ಗುಂಪು ಅವರ ಮೇಲೆ ರಾಜಕೀಯಕ್ಕೆ ಬರದಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ. ರಜನಿಯ ರಾಜಕೀಯ ಪ್ರವೇಶ ವಿರೋಧಿಸಿ ತಮಿಳುನಾಡಲ್ಲಿ ಪ್ರತಿಭಟನೆಗೂ ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ರಜನಿ ನಿವಾಸಕ್ಕೆ ಭದ್ರತೆ ಒದಗಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.