
ಬಂಟ್ವಾಳ(ನ.11): ಬಿಜೆಪಿ ನಾಯಕರು ಯಾಕೋ ತಮ್ಮ ಪಕ್ಷದ ನಾಯಕರನ್ನೇ ನಿಂದಿಸುತ್ತಿದ್ದಾರೆ. ನಿನ್ನೆ ಶ್ರೀರಾಮುಲು ಯಡವಟ್ಟು ಮಾಡಿಕೊಂಡಿದ್ದರೆ ಇಂದು ಬಂಟ್ವಾಳದ ಪರಿವರ್ತನಾ ಯಾತ್ರೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕಾಂಗ್ರೆಸ್ ನಾಯರನ್ನು ಟೀಕಿಸುವ ಬರದಲ್ಲಿ ತಮ್ಮ ಪಕ್ಷದ ಅದರಲ್ಲೂ ಪ್ರಧಾನಮಂತ್ರಿಗಳನ್ನೇ ಟೀಕಿಸಿದ್ದಾರೆ.
ಕಾಂಗ್ರೆಸ್ ನಾಯಕರ ಟೀಕಿಸುವ ಬರದಲ್ಲಿ ಯಡವಿದ ಡಿ.ವಿ ಸದಾನಂದಗೌಡ ಅವರು ಬಾಯಿ ತಪ್ಪಿ ನರೇಂದ್ರ ಮೋದಿಗೆ ನಾಚಿಕೆಯಾಗಬೇಕು ಎಂದ ಹೇಳಿದ್ದಾರೆ. ನಿನ್ನೆ ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ಶ್ರೀರಾಮುಲು ಕೂಡ ವೀರಾವೇಶದ ಭಾಷಣ ಮಾಡುತ್ತಾ, ‘ಮೊನ್ನೆ ಮೊನ್ನೆ ಶೋಭಾ ಕರಂದ್ಲಾಜೆ ಶೋಭಾ, ಬಿಎಸ್ವೈ, ಡಿವಿಎಸ್ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವಂತ ಕೆಲಸ ಮಾಡಿದ್ದರು. ಇದನ್ನು ನೀವೆಲ್ಲರೂ ನೋಡಿದ್ದೀರಿ ಎಂದು ಭಾಷಣದ ವೇಳೆ ಸಂಸದ ಶ್ರೀರಾಮುಲು ಯಡವಟ್ಟು ಹೇಳಿಕೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.