ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ; ಜಾರ್ಜ್ ವಿರುದ್ಧ ಕ್ರಮ ಕೈಗೊಳ್ತಾರಾ ಸಿಎಂ?

Published : Jun 22, 2018, 10:13 AM IST
ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ; ಜಾರ್ಜ್ ವಿರುದ್ಧ ಕ್ರಮ ಕೈಗೊಳ್ತಾರಾ ಸಿಎಂ?

ಸಾರಾಂಶ

ಡಿವೈಎಸ್​ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ ಬಂದಿದೆ. ಪ್ರಕರಣದ ಎಲ್ಲಾ ಆರೋಪಿಗಳ ಎದೆಯಲ್ಲಿ ಮತ್ತೆ ಢವಢವ ಶುರುವಾಗಿದೆ.  ನಾ.ಕೇಶವ್​ ನಾರಾಯಣ ವರದಿ ಅಧ್ಯಯನಕ್ಕಾಗಿ ಸಮಿತಿ ರಚನೆಗೆ ಸರ್ಕಾರ ನಿರ್ಧರಿಸಿದೆ.  ಸಮಿತಿ ರಚನೆ ಮಾಡಲು ಗೃಹ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ. 

ಬೆಂಗಳೂರು (ಜೂ. 22): ಡಿವೈಎಸ್​ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ ಬಂದಿದೆ. ಪ್ರಕರಣದ ಎಲ್ಲಾ ಆರೋಪಿಗಳ ಎದೆಯಲ್ಲಿ ಮತ್ತೆ ಢವಢವ ಶುರುವಾಗಿದೆ. 

ನಾ.ಕೇಶವ್​ ನಾರಾಯಣ ವರದಿ ಅಧ್ಯಯನಕ್ಕಾಗಿ ಸಮಿತಿ ರಚನೆಗೆ ಸರ್ಕಾರ ನಿರ್ಧರಿಸಿದೆ.  ಸಮಿತಿ ರಚನೆ ಮಾಡಲು ಗೃಹ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ. 

ನ್ಯಾ. ಕೇಶವ್​ ನಾರಯಣ್​ ಆಯೋಗ 2018 ರ ಫೆಬ್ರವರಿಯಲ್ಲಿ ಸರ್ಕಾರಕ್ಕೆ ವರದಿ ನೀಡಿತ್ತು.  ನಿವೃತ್ತ ಡಿಜಿಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆಗೆ ನಿರ್ಧಾರ ಮಾಡಲಾಗಿದೆ.  ಇದಕ್ಕೆ ಗೃಹ ಸಚಿವರ ಅನುಮೋದನೆಯಷ್ಟೇ ಬಾಕಿ ಇದೆ.  ನಿವೃತ್ತ ಡಿಜಿಪಿಗಳಾದ ಎಂ.ಕೆ.ಶ್ರೀವಾಸ್ತವ, ಎ.ಆರ್​.ಇನ್​ಪೇಂಟ್​,  ಎಸ್​.ಸಿ. ಸಕ್ಸೇನಾ ಅವರಲ್ಲಿ ಒಬ್ಬರನ್ನು ಸಮಿತಿ ಮುಖ್ಯಸ್ಥರಾಗಿ ನೇಮಕ ಮಾಡುವ  ಸಾಧ್ಯತೆ ಇದೆ. 

ಗೃಹ ಇಲಾಖೆ ನಿರ್ಧಾರದಿಂದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.   ಬೃಹತ್​ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್​​, ಐಜಿಪಿ ಪ್ರಣಬ್​ ಮೊಹಂತಿ,  ಡಿಜಿಪಿ ಎ.ಎಂ.ಪ್ರಸಾದ್​​ ಈ ಪ್ರಕರಣದ ಆರೋಪಿಗಳಾಗಿದ್ದಾರೆ .  ಕೆ.ಜೆ.ಚಾರ್ಜ್​ ವಿರುದ್ದ ಸಿಎಂ ಹೆಚ್​ಡಿಕೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.  
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು