
ನವದೆಹಲಿ : ಹರ್ಯಾಣದ ಹಜ್ಜಾರ್ ಜಿಲ್ಲೆಯಲ್ಲಿ ಮಧ್ಯಮ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಮುಂಜಾನೆ 6.28ರ ಸುಮಾರಿಗೆ ಇಲ್ಲಿ ಭೂ ಕಂಪನವಾಗಿದ್ದು ಭೂಮಿಯ 10 ಕಿ.ಮೀ ಆಳದಲ್ಲಿ ಭೂಮಿ ನಡುಗಿದೆ.
ಕಳೆದ 24ಗಂಟೆಯಲ್ಲಿ 2ನೇ ಬಾರಿ ಇಲ್ಲಿ ಭೂ ಕಂಪನ ಸಂಭವಿಸಿದೆ ಎಂದು ಭೂ ಕಂಪನ ಮಾಪನ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ.
3.7ರ ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು, ಇದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಭೂಕಂಪನ ಮಾಪನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರವೂ ಕೂಡ ಬೆಳಗ್ಗೆ 4.37ರ ಸುಮಾರಿಗೆ ಭೂ ಕಂಪನ ಸಂಭವಿಸಿತ್ತು. ಭೂಮಿಯ 10 ಕಿ.ಮೀ ಆಳದಲ್ಲಿ 3.8ರ ತೀವ್ರತೆಯಲ್ಲಿ ಭೂಮಿ ನಡುಗಿತ್ತು.
ಕೆಲ ದಿನಗಳ ಹಿಂದಷ್ಟೇ ದಿಲ್ಲಿಯಲ್ಲಿ ಅಪಾರ ಪ್ರಮಾಣದಲ್ಲಿ ಮಳೆ ಸುರಿದು ಜನಜೀವನ ತತ್ತರಿಸಿತ್ತು. ಇದೀಗ ಪದೇ ಪದೇ ಸಂಭವಿಸುತ್ತಿರುವ ಭೂ ಕಂಪನದಿಂದ ಜನರಲ್ಲಿ ಆತಂಕ ಮೂಡಿದೆ.
(ಸಾಂದರ್ಬಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.