
ಶ್ರೀನಗರ : ಇಷ್ಟು ದಿನಗಳ ಕಾಲ ವಿವಿಧೆಡೆ ಭಾರೀ ಮಳೆ ನೆರೆ ಹಾವಳಿಯಿಂದ ತತ್ತರಿಸಿದ ಜನತೆಗೆ ಇದೀಗ ಮತ್ತೊಂದು ಆತಂಕ ಎದುರಾಗಿದೆ.
ಜಮ್ಮು ಕಾಶ್ಮೀರದಲ್ಲಿ ಭಾನುವಾರ ಭೂ ಕಂಪನ ಸಂಭವಿಸಿದೆ.
4.6ರ ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು ಯಾವುದೇ ರೀತಿಯ ಆಸ್ತಿ ಪಾಸ್ತಿ, ಪ್ರಾಣ ಹಾನಿ ಸಂಭವಿಸಿದ ವರದಿಯಾಗಿಲ್ಲ.
ಬೆಳಗ್ಗೆ 8 ಗಂಟೆ 9 ನಿಮಿಷಕ್ಕೆ ಭೂಮಿಯ 106 ಕಿ.ಮೀ ಆಳದಲ್ಲಿ ಕಂಪಿಸಿದೆ. ಉತ್ತರ ಗಿಲ್ಗಿಟ್ ಪ್ರದೇಶದಲ್ಲಿ ಭೂ ಕಂಪನವಾಗಿದೆ.
2005ರಲ್ಲಿ ಇದೇ ಪ್ರದೇಶಲ್ಲಿ ಭಾರೀ ಭೂ ಕಂಪನ ಸಂಭವಿಸಿ 80 ಸಾವಿರ ಜನರು ಮೃತಪಟ್ಟಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.