
ನವದೆಹಲಿ (ಅ. 11): ರಾಜಕೀಯವನ್ನು ಅಪರಾಧಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಹೊಸ ಕಾನೂನು ಜಾರಿಗೊಳಿಸಿದೆ.
ಇದರನ್ವಯ, ಇನ್ನು ಮುಂದಿನ ಯಾವುದೇ ಚುನಾವಣೆಗಳಲ್ಲಿ ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್ ಆರೋಪಗಳ ಕುರಿತು ಮುದ್ರಣ ಮಾಧ್ಯಮ ಮತ್ತು ಟೀವಿ ವಾಹಿನಿಗಳಲ್ಲಿ ಕನಿಷ್ಠ 3 ಬಾರಿ ಜಾಹೀರಾತು
ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ.
ನವೆಂಬರ್- ಡಿಸೆಂಬರ್ನಲ್ಲಿ ನಡೆಯಲಿರುವ 5 ರಾಜ್ಯಗಳ ವಿಧಾನಸಭಾ ಚುನಾವಣೆ ವೇಳೆಯಿಂದಲೇ ಈ ಹೊಸ ನಿಯಮ ಜಾರಿಗೆ ಬಂದಿದೆ. ಕ್ರಿಮಿನಲ್ ಹಿನ್ನೆಲೆ ಬಗ್ಗೆ ಅಭ್ಯರ್ಥಿಗಳು ಹಾಗೂ ಅವರು ಪ್ರತಿನಿಧಿಸುವ ರಾಜಕೀಯ ಪಕ್ಷಗಳು, ಈ ಬಗ್ಗೆ ಜಾಹೀರಾತು ನೀಡುವ ಮೂಲಕ ಜನರಿಗೆ ಮಾಹಿತಿ ನೀಡುವುದನ್ನು ಕಡ್ಡಾಯ ಮಾಡುವ ನಿಯಮ ಜಾರಿಗೆ ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗ ಸಲಹೆ ನೀಡಿತ್ತು.
ಆ ಸಲಹೆಯನ್ನು ಕೇಂದ್ರ ಕಾನೂನು ಸಚಿವಾಲಯ ಮಾನ್ಯ ಮಾಡಿ ಬುಧವಾರ ಅಧಿಸೂಚನೆ ಹೊರಡಿಸಿದೆ. ಅದರ ಬೆನ್ನಲ್ಲೇ, ಹೊಸ ನಿಯಮ ಜಾರಿಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಇದರನ್ವಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ಬಳಿಕ, ಪ್ರಮುಖ ದಿನಪತ್ರಿಕೆ ಮತ್ತು ಟೀವಿಗಳಲ್ಲಿ ಕ್ರಿಮಿನಲ್ ಕೇಸಲ್ಲಿ ತಾವು ಈಗಾಗಲೇ ಶಿಕ್ಷೆ ಅನುಭವಿಸಿದ್ದರೆ ಅಥವಾ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದರೆ ಅದರ ಬಗ್ಗೆ ಕನಿಷ್ಠ 3 ಬಾರಿ ಜಾಹೀರಾತು ನೀಡಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.