
ನವದೆಹಲಿ(ಮೇ.22): ಕೇಂದ್ರ ಚುನಾವಣಾ ಆಯೋಗ ಗುಜರಾತ್, ಪಶ್ಚಿಮ ಬಂಗಾಳ ಹಾಗೂ ಗೋವಾ ರಾಜ್ಯಗಳ 10 ರಾಜ್ಯಸಭಾ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಿದೆ.
ಈ ಹಿಂದೆ ಆಯೋಗ ನಿರ್ಧರಿಸಿದಂತೆ ಜೂನ್ 8 ರಂದು ಚುನಾವಣೆ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಜೂನ್ 25 ರಂದು ನಡೆಯುವ ರಾಷ್ಟ್ರಪತಿ ಚುನಾವಣೆ ಹಾಗೂ ಜೂನ್ 3 ರಂದು ನಡೆಯುವ ಇವಿಎಂ ರಾಜಕೀಯ ಪ್ರತಿನಿಧಿಗಳೊಂದಿಗೆ ನಡೆಸುವ ಇವಿಎಂ ಪರೀಕ್ಷೆಯ ಸಂಬಂಧ ಚುನಾವಣೆಯನ್ನು ಮುಂದೂಡಲಾಗಿದೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ಹಾಗೂ ತೃಣಮೂಲ್ ಕಾಂಗ್ರೆಸ್ ಪಕ್ಷದ ನಾಯಕ ಡೇರಿಕ್ ಓಬ್ರಿಯೇನ್ ಅವರ ರಾಜ್ಯಸಬಾ ಸ್ಥಾನ ಜುಲೈ ಹಾಗೂ ಆಗಸ್ಟ್'ನಲ್ಲಿ ಕೊನೆಗೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.