
ನವದೆಹಲಿ(ಜ.19): ನೂತನ ವರ್ಷದ ಆರಂಭದಲ್ಲಿಯೇ ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಸರ್ಕಾರಕ್ಕೆ ಚುನಾವಣಾ ಆಯೋಗ ಬಹುದೊಡ್ಡ ಶಾಕ್ ನೀಡಿದೆ.
ಲಾಭದಾಯಕ ಹುದ್ದೆ ಹೊಂದಿರುವ 20 ಶಾಸಕರನ್ನು ಅನರ್ಹಗೊಳಿಸಿದ್ದು, ಆದೇಶವನ್ನು ಅನುಮೋದಿಸಲು ರಾಷ್ಟ್ರಪತಿ ರಾಮ್'ನಾಥ್ ಕೋವಿಂದ್ ಅವರಿಗೆ ಶಿಫಾರಸ್ಸು ಮಾಡಿದೆ. ಶಿಫಾರಸ್ಸಿನ ಅನ್ವಯದಂತೆ ಶಾಸಕರು ಅನರ್ಹರಾದರೆ ಆಯಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.
ಪ್ರಸ್ತುತ ದೆಹಲಿ ವಿದಾನಸಭೆಯ 70 ಸದಸ್ಯಬಲದಲ್ಲಿ 65 ಎಎಪಿ ಸದಸ್ಯರಿದ್ದಾರೆ. 2015ರ ಮಾರ್ಚ್'ನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 21 ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.
ವಕೀಲ ಪ್ರಶಾಂತ್ ಪಟೇಲ್ ಅವರು ಶಾಸಕರನ್ನು ಅನರ್ಹಗೊಳಿಸಬೇಕೆಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಮನವಿ ಸಲ್ಲಿಸಿದ್ದರು. ಚುನಾವಣಾ ಆಯೋಗ ಶಾಸಕರಿಗೆ ನೋಟಿಸ್ ನೀಡಿದ್ದರೂ ಅವರ್ಯಾರು ಸರಿಯಾಗಿ ಸ್ಪಂದಿಸಿರಲಿಲ್ಲ. ಆಯೋಗದ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಎಎಪಿ ಇದು ಬಿಜೆಪಿ ಸರ್ಕಾರದ ಅಜೆಂಡಾ ಎಂದು ಟೀಕಿಸಿದೆ.
20 ಶಾಸಕರು ಅನರ್ಹಗೊಂಡರೂ ಸರ್ಕಾರಕ್ಕೆ ತೊಂದರೆಯಾಗುವುದಿಲ್ಲ. ಸರ್ಕಾರ ರಚನೆಗೆ 36 ಸದಸ್ಯಬಲ ಸಾಕು. ಈ ಶಾಸಕರೆಲ್ಲ ಅನರ್ಹಗೊಂಡರೆ ಇನ್ನು 45 ಶಾಸಕರು ಉಳಿದುಕೊಂಡಿರುತ್ತಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.