ಬ್ರೇಕಿಂಗ್ ನ್ಯೂಸ್: ಡಿಕೆ ಶಿವಕುಮಾರ್ ಅರೆಸ್ಟ್

Published : Sep 03, 2019, 08:40 PM ISTUpdated : Sep 03, 2019, 08:56 PM IST
ಬ್ರೇಕಿಂಗ್ ನ್ಯೂಸ್: ಡಿಕೆ ಶಿವಕುಮಾರ್ ಅರೆಸ್ಟ್

ಸಾರಾಂಶ

3ದಿನ ವಿಚಾರಣೆ ಎದುರಿಸಿ 4ನೇ ದಿನಕ್ಕೆ ವಿಚಾರಣೆಗೆ ಹೋಗಿದ್ದ ಮಾಜಿ ಸಚಿವ, ಕನಕಪುರ ಕ್ಷೇತ್ರ ಹಾಲಿ ಶಾಸಕ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ನವದೆಹಲಿ, [ಸೆ.03] : ಕಳೆದ 3 ದಿನ ವಿಚಾರಣೆ ಎದುರಿಸಿ 4ನೇ ದಿನಕ್ಕೆ ವಿಚಾರಣೆಗೆ ಹೋಗಿದ್ದ ಮಾಜಿ ಸಚಿವ, ಕನಕಪುರ ಕ್ಷೇತ್ರದ ಹಾಲಿ ಶಾಸಕ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಕಳೆದ ಮೂರು ದಿನಗಳಿಂದ ಇಡಿ ವಿಚಾರಣೆ ಎದುರಿಸಿರುವ ಡಿಕೆ ಶಿವಕುಮಾರ್ ಅವರನ್ನು ಮಂಗಳವಾರ 4ನೇ ದಿನವೂ ಸಹ ವಿಚಾರಣೆಗೆ ಬರುವಂತೆ ನಿನ್ನೆ [ಸೋಮವಾರ] ಸೂಚನೆ ನೀಡಿತ್ತು.

 ಅದರಂತೆ ಇಂದು [ಮಂಗಳವಾರ] ವಿಚಾರಣೆಗೆ ಡಿಕೆ ಶಿವಕುಮಾರ್ ಅವರು ನವದೆಹಲಿಯಲ್ಲಿರುವ ಇಡಿ ಕಚೇರಿ ಹೋಗಿದ್ದರು. ಆದ್ರೆ, ಇಂದು ಸಂಜೆ ವರೆಗೂ ಡಿಕೆಶಿ ಅವರನ್ನು ವಿಚಾರಣೆಗೊಳಪಡಿಸಿದ ಇಡಿ ಅಧಿಕಾರಿಗಳು, ರಾತ್ರಿ ಬಂಧನಕ್ಕೊಳಪಡಿಸಿದ್ದಾರೆ.

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸದ ಡಿಕೆಶಿ.. ಮುಂದಿನ ಸ್ಟೆಪ್ ಏನು?

8.59 ಕೋಟಿ ರೂಪಾಯಿ ದಾಖಲೆ ಇಲ್ಲದ ಹಣ ಪತ್ತೆ ಸಂಬಂಧಪಟ್ಟಂತೆ ಇಡಿ ನೀಡಿದ್ದ ಸಮನ್ಸ್ ಮೇರೆಗೆ ಬೆಂಗಳೂರಿನಿಂದ ಖುದ್ದಾಗಿ ದೆಹಲಿಗೆ ತೆರಳಿದ್ದ ಡಿಕೆಶಿ, ಕಳೆದು 3 ದಿನಗಳಿಂದ ಇ.ಡಿ. ಕಚೇರಿಯಲ್ಲಿ  ವಿಚಾರಣೆ ಎದುರಿಸುತ್ತಿದ್ದರು.  

ಡಿಕೆಶಿಯನ್ನು ಬೆಚ್ಚಿಬೀಳಿಸಿದ ED ಅಧಿಕಾರಿಗಳ 2 ಪ್ರಶ್ನೆಗಳು!

ಗಣೇಶ ಚತುರ್ಥಿ ಸಹ ಡಿಕೆಶಿಗೆ ವಿನಾಯಿತಿ ನೀಡಿರಲಿಲ್ಲ. ಇದ್ರಿಂದ ಡಿಕೆಶಿ ಅಸಮಾಧಾನಗೊಂಡು ಕಣ್ಣೀರಿಟ್ಟಿದ್ದರು. ಆದರೆ  ಇಂದು 4ನೇ ದಿನ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್​ ಅವರನ್ನು ವಿಚಾರಣಗೆ ಒಳಪಡಿಸಿ ಬಳಿಕ ಬಂಧಿಸಿದ್ದಾರೆ. ಡಿ.ಕೆ.ಶಿವಕುಮಾರ್​ ವಿಚಾರಣೆಗೆ ಸಹಕರಿಸಲಿಲ್ಲ. ಕೇಳಿದ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟಲ್ಲವೆಂದು ಡಿಕೆಶಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ