
ನವದೆಹಲಿ, [ಸೆ.04]: ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಡಿ ವಿಶೇಷ ನ್ಯಾಯಾಲಯ ಸೆ.13ರ ವರೆಗೆ ಇಡಿ ವಶಕ್ಕೆ ನೀಡಿ ಇಂದು [ಬುಧವಾರ] ಆದೇಶ ಹೊರಡಿಸಿದೆ.
4 ದಿನಗಳ ಕಾಲ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ನಿನ್ನೆ [ಮಂಗಳವಾರ] ಡಿಕೆಶಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಇಂದು [ಬುಧವಾರ] ಸಂಜೆ ನವದೆಹಲಿಯ ರೋಸ್ ಅವೆನ್ಯೂ ಇಡಿ ವಿಶೇಷ ಕೋರ್ಟ್ ಹಾಜರುಪಡಿಸಲಾಯಿತು.
ಟ್ರಬಲ್ ಶೂಟರ್ಗೆ ಬಿಗ್ ಟ್ರಬಲ್: ಇಡಿ ವಶಕ್ಕೆ ಡಿಕೆ ಶಿವಕುಮಾರ್
ಆದ್ರೆ ಕೋರ್ಟ್ ಡಿಕೆಶಿ ಪರ ವಕೀಲರ ಮನವಿಯನ್ನು ತಿರಸ್ಕರಿಸಿ ಇಂದಿನಿಂದ 10 ದಿನಗಳ ಕಾಲ ಅಂದ್ರೆ ಸೆಪ್ಟೆಂಬರ್ 23ರ ವರೆಗೆ ಇಡಿ ವಶಕ್ಕೆ ನೀಡಿದೆ.
ಇದೀಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಬಂಧನದಲ್ಲಿರುವ ಟ್ರಬಲ್ ಶೂಟರ್ ಮುಂದಿರುವ ಕಾನೂನು ಅವಕಾಶಗಳೇನು? ಎನ್ನುವ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ.
* ಇಡಿ ವಶಕ್ಕೆ ನೀಡಿದ ರೋಸ್ ಅವೆನ್ಯೂ ಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಲು ಅವಕಾಶ ಇದೆ.
*ಜಾಮೀನಿಗಾಗಿ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬಹುದು.
* ಒಂದು ವೇಳೆ ದೆಹಲಿ ಹೈಕೋರ್ಟಿನಲ್ಲಿ ಜಾಮೀನು ಸಿಗದಿದ್ದರೆ ಸುಪ್ರೀಂಕೋರ್ಟ್ ಮೊರೆ ಹೋಗಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.