ಮತ್ತೆ ಬಂಧನದ ಭೀತಿಯಲ್ಲಿ ಡಿ.ಕೆ.ಶಿವಕುಮಾರ್‌

By Web DeskFirst Published Sep 18, 2018, 12:33 PM IST
Highlights

ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅದ್ಯಾಕೋ ಟೈಮ್ ಸರಿ ಇಲ್ಲ ಅಂತ ಕಾಣಿಸುತ್ತೇ. ಒಂದಲ್ಲಾ ಒಂದು ಸಂಕಷ್ಟಗಳನ್ನು ಎದುರಿಸುತ್ತಿರುವ  ಡಿ.ಕೆ.ಶಿವಕುಮಾರ್​ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರು, (ಸೆ.18): ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅದ್ಯಾಕೋ ಟೈಮ್ ಸರಿ ಇಲ್ಲ ಅಂತ ಕಾಣಿಸುತ್ತೇ. ಒಂದಲ್ಲಾ ಒಂದು ಸಂಕಷ್ಟಗಳನ್ನು ಎದುರಿಸುತ್ತಿರುವ  ಡಿ.ಕೆ.ಶಿವಕುಮಾರ್​ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಮೊನ್ನೆ ಅಷ್ಟೇ  ಆದಾಯ ತೆರಿಗೆ ಇಲಾಖೆಯಿಂದ ದಾಖಲಾದ ಪ್ರಕರಣಗಳಲ್ಲಿ ಡಿ.ಕೆ.ಶಿವಕುಮಾರ್​ ಜಾಮೀನು ಪಡೆದು ನಿಟ್ಟುಸಿರು ಬಿಟ್ಟಿದ್ದರು. ಆದರೆ, ​ಇದೀಗ ಡಿಕೆಶಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಎಫ್​ಐಆರ್ ದಾಖಲಿಸಿದೆ.

ಇದನ್ನು ಓದಿ: ಡಿ.ಕೆ. ಶಿವಕುಮಾರ್‌ಗೆ ಬಿಗ್ ರಿಲೀಫ್, ಬಂಧನ ಭೀತಿಯಿಂದ ಬಚಾವ್

ಅಕ್ರಮ ಆದಾಯ ಗಳಿಕೆ ಆರೋಪದಡಿ ಜಾರಿ ನಿರ್ದೇಶನಾಲಯ ಎಫ್‌ಐಆರ್ ದಾಖಲಿಸಿದೆ. ದೆಹಲಿಯ ಫ್ಲಾಟ್‌ನಲ್ಲಿ ಸಿಕ್ಕಿದ್ದ 8.59 ಕೋಟಿ ರೂಪಾಯಿಗಳ ಪ್ರಕರಣದಲ್ಲಿ ಎಫ್‌ಐಆರ್ ದಾಖಲು ಮಾಡಿದೆ. ಈ ಮೂಲಕ ಸಚಿವ ಡಿ.ಕೆ.ಶಿವಕುಮಾರ್​ಗೆ ಬಂಧನದ ಭೀತಿ ಎದುರಾಗಿದೆ.  

ಡಿಕೆಶಿಯನ್ನು ವಿಚಾರಣೆಗೆಂದು ದೆಹಲಿಗೆ ಕರೆದು ಅಲ್ಲೇ ಬಂಧಿಸುವ ಸಾಧ್ಯತೆ. ಒಂದು ವೇಳೆ ಡಿ.ಕೆ. ಶಿವಕುಮಾರ್ ಬಂಧನವಾದರೆ, ಸಮ್ಮಿಶ್ರ ಸರ್ಕಾರಕ್ಕೂ ಕಂಟಕ ಎದುರಾಗುವ ಸಾಧ್ಯತೆ ಇದೆ.

click me!