ಡಿಕೆ ಶಿವಕುಮಾರ್‌ಗೆ ದೆಹಲಿ ಇಡಿ ಕಚೇರಿಯಲ್ಲೆ ‘ಗೌರಿ-ಗಣೇಶ’ ಹಬ್ಬ

Published : Aug 31, 2019, 09:24 PM ISTUpdated : Aug 31, 2019, 09:29 PM IST
ಡಿಕೆ ಶಿವಕುಮಾರ್‌ಗೆ ದೆಹಲಿ ಇಡಿ ಕಚೇರಿಯಲ್ಲೆ ‘ಗೌರಿ-ಗಣೇಶ’ ಹಬ್ಬ

ಸಾರಾಂಶ

ಡಿಕೆ ಶಿವಕುಮಾರ್‌ಗೆ ಗೌರಿ-ಗಣೇಶ ಹಬ್ಬದ ಸಂಭ್ರಮ ಇಲ್ಲ/ ಸೋಮವಾರವೂ ಇಡಿ ಪ್ರಶ್ನೆಗಳಿಗೆ ಉತ್ತರಿಸಲೇಬೇಕಿದೆ/ ಎರಡು ದಿನದ ವಿಚಾರಣೆ ಬಳಿಕ ಮತ್ತೆ ಬರಲು ಹೇಳಿದ ಜಾರಿ ನಿರ್ದೇಶನಾಲಯ/

ನವದೆಹಲಿ[ಆ. 31]  ಡಿಕೆ ಶಿವಕುಮಾರ್ ಅವರಿಗೆ ಒಂದು ದಿನದ ರಿಲೀಫ್ ಸಿಕ್ಕಿದೆ. ಗೌರಿ ಗಣೇಶ ಹಬ್ಬವನ್ನು ಲೆಕ್ಕಿಸದೆ ಶಿವಕುಮಾರ್ ಮತ್ತೆ ಸೋಮವಾರ 11 ಗಂಟೆಗೆ ವಿಚಾರಣೆಗೆ ಹಾಜರಾಗಲೇಬೇಕಿದೆ.

ಶನಿವಾರ ವಿಚಾರಣೆ ಮುಗಿಸಿ ಹೊರಬಂದ ಡಿಕೆ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಸೋಮವಾರ ವಿಚಾರಣೆಗೆ ಬರಲು ಸೂಚನೆ ನೀಡಿದ್ದಾರೆ.  ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಸೋಮವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ತಿಳಿಸಿದ್ದಾರೆ ಎಂದರು.

ಕರ್ನಾಟಕಕ್ಕೆ ಹೊಸ ಸಿಎಂ, ಮೋದಿಗೆ ಸ್ವಾಮಿ ಶಾಕ್; ಇಲ್ಲಿವೆ ಆ.31ರ ಟಾಪ್ 10 ಸುದ್ದಿ!

ಗೌರಿ-ಗಣೇಶ ಹಬ್ಬಕ್ಕೆ ವಿನಾಯ್ತಿ ನೀಡುವಂತೆ ಕೇಳಿದ್ದೆ. ನನ್ನ ಮನವಿಗೆ ಅಧಿಕಾರಿಗಳು ಒಪ್ಪಲಿಲ್ಲ, ಒಳ್ಳೆಯದಾಗಲಿ.. ನಾನು ಸೋಮವಾರ ಮತ್ತೆ ವಿಚಾರಣೆಗೆ ಹಾಜರಾಗುವೆ ಎಂದು ಶಿವಕುಮಾರ್ ತಿಳಿಸಿದರು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Tirupathi Laddu: ತಿರುಪತಿ ಲಡ್ಡು ಮಾರಾಟದಲ್ಲಿ ವಿಶ್ವದಾಖಲೆ: ಒಂದೇ ತಿಂಗಳಲ್ಲಿ 1.26 ಕೋಟಿ ಲಡ್ಡು ಸೇಲ್!
Honey Facts: 3000 ವರ್ಷವಾದರೂ ಜೇನುತುಪ್ಪ ಕೆಡುವುದಿಲ್ಲವೇ? ಇಲ್ಲಿದೆ ಅಚ್ಚರಿಯ ಸತ್ಯ!