ಇತ್ತ ಬೈ ಎಲೆಕ್ಷನ್ ಡೇಟ್ ಫಿಕ್ಸ್: ಅತ್ತ ಡಿಕೆಶಿ ಜಾಮೀನು ತೀರ್ಪು ಮತ್ತೆ ಮುಂದೂಡಿಕೆ

Published : Sep 21, 2019, 02:42 PM ISTUpdated : Sep 21, 2019, 02:51 PM IST
ಇತ್ತ ಬೈ ಎಲೆಕ್ಷನ್ ಡೇಟ್ ಫಿಕ್ಸ್: ಅತ್ತ ಡಿಕೆಶಿ ಜಾಮೀನು ತೀರ್ಪು ಮತ್ತೆ ಮುಂದೂಡಿಕೆ

ಸಾರಾಂಶ

ಇತ್ತ ಕರ್ನಾಟಕದ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಮತ್ತೊಂದೆಡೆ ಡಿಕೆ ಶಿವಕುಮಾರ್ ಅವರ ಜಾಮೀನು ತೀರ್ಪುನ್ನು ಕೋರ್ಟ್ ಮುಂದೂಡಿದೆ.

ನವದೆಹಲಿ, (ಸೆ.21): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರ ಜಾಮೀನು ತೀರ್ಪು ಮುಂದೂಡಲಾಗಿದೆ.

ಸದ್ಯಕ್ಕೆ ಡಿಕೆಶಿಗೆ ಜೈಲೇ ಗತಿ, ಅರ್ಜಿ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ!

ಇಂದು (ಶನಿವಾರ) ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಇಡಿ ವಿಶೇಷ ಕೋರ್ಟ್ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್, ಡಿಕೆಶಿ ಜಾಮೀನು ತೀರ್ಪು ಅನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.

ಜಾಮೀನು ಸಿಗುತ್ತೋ ಅಥವಾ ಇಲ್ಲ ಎನ್ನುವುದು ಡಿಕೆಶಿ ಭವಿಷ್ಯ ಸೆಪ್ಟೆಂಬರ್ 25ರಂದು ತಿಳಿಯಲಿದೆ. ಅಲ್ಲಿಯವರೆಗೆ ಡಿಕೆ ಶಿವಕುಮಾರ್‌ಗೆ ತಿಹಾರ್ ಜೈಲೇ ಗತಿ.

ಕರ್ನಾಟಕ 15 ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಫಿಕ್ಸ್!: ಅನರ್ಹರಿಗೆ ಟೆನ್ಶನ್

ಇತ್ತ ಕರ್ನಾಟಕದ 15 ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಅ.24ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ. ಇದ್ರಿಂದ ಕಾಂಗ್ರೆಸ್‌ಗೆ ದಿಕ್ಕುತೋಚದಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!