
ನವದೆಹಲಿ, (ಸೆ.04): ಮನಿ ಲ್ಯಾಂಡ್ರಿಂಗ್ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ಡಿಕೆ ಶಿವಕುಮಾರ್ ಅವರನ್ನು ಯಾವ ಕೋರ್ಟ್ಗೆ ಹಾಜರುಪಡಿಸುತ್ತಾರೆ ಎನ್ನುವ ಮಾಹಿತಿ ಸಿಕ್ಕಿದೆ.
ಪಿಎಂಎಲ್ಎ ಕಾಯ್ದೆ -2002ರ ಅನ್ವಯ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ದಾಖಲಾದ ಪ್ರಕರಣಗಳ ವಿಚಾರಣೆಗೆ ರೋಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲು ಇಡಿ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಡಿಕೆಶಿ ಸಂಬಂಧಿಸಿದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಲೋ ಬಿಪಿ ಹಾಗೂ ಹೈ ಶೂಗರ್ನಿಂದ ಬಳಲುತ್ತಿರುವ ಡಿಕೆಶಿಯನ್ನು ಆರ್ಎಂಎಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಇನ್ನೇನು ಕಲವೇ ಕ್ಷಣಗಳಲ್ಲಿ ರೋಸ್ ಅವೆನ್ಯೂ ಕೋರ್ಟ್ಗೆ ಹಾಜರುಪಡಿಸಲಾಗುತ್ತಿದೆ.
ಇಡಿ ವಿಶೇಷ ಕೋರ್ಟ್ ಜಡ್ಜ್ ಅಜಯ್ ಕುಮಾರ್ ಕುಹಾರ್ ಮುಂದೆ ಡಿಕೆಶಿ ಪರ ಅಭಿಷೇಕ್ ಮನು ಸಂಘ್ವಿ ಅವರು ವಾದ ಮಂಡಿಸಲಿದ್ದಾರೆ
ವಿಚಾರಣೆಗೆ ಹೋಗಿದ್ದ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಖಾನ್ ಮಾರ್ಕೆಟ್ ನ ತನ್ನ ಪ್ರಧಾನ ಕಚೇರಿಯಲ್ಲಿ ನಿನ್ನೆ (ಮಂಗಳವಾರ) ಬಂಧಿಸಿದೆ.
ಇದು ನವದೆಹಲಿಯ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ. ಈ ಹಿನ್ನೆಲೆಯಲ್ಲಿ ಪಟಿಯಾಲ ನ್ಯಾಯಾಲಯಕ್ಕೂ ಸಹ ಡಿಕೆ ಶಿವಕುಮಾರ್ ಅವರನ್ನು ಹಾಜರುಪಡಿಸಬಹುದಿತ್ತು. ಆದ್ರೆ, ಇಡಿ ಅಧಿಕಾರಿಗಳು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಲು ತೀರ್ಮಾನಿಸಿದ್ದಾರೆ.
ಇತ್ತಿಚಿನ ದಿನಗಳಲ್ಲಿ ಇಡಿಯು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಆರೋಪಗಳನ್ನು ಹೆಚ್ಚಾಗಿ ಹಾಜರು ಪಡಿಸುತ್ತಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.