
ನವದೆಹಲಿ (ಫೆ.17): ತಮಿಳುನಾಡು ಮುಖ್ಯಮಂತ್ರಿಯಾಗಿ ಇಡಪ್ಪಾಡಿ ಪಳನಿಸ್ವಾಮಿ 31 ಶಾಸಕರೊಂದಿಗೆ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಶನಿವಾರ ವಿಶ್ವಾಸಮತ ಯಾಚನೆಯಿದ್ದು ಪಳನೀಸ್ವಾಮಿ ಭವಿಷ್ಯ ಅಂತಿಮವಾಗಿ ನಿರ್ಧಾರವಾಗಲಿದೆ.
ಪಳನೀಸ್ವಾಮಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿ ವಿಧಾನ ಸಭೆಗೆ ಪ್ರವೇಶಿಸಿದಾಗ ಕೆಲವು ಮಜವಾದ ಪ್ರಸಂಗಗಳು ನಡೆದವು. ಕೆಲ ದಿನಗಳ ಹಿಂದೆ ವಿಧಾನಸಭೆಯಲ್ಲಿ ಓ ಪನ್ನೀರ್ ಸೆಲ್ವಂ ಸ್ಟಾಲಿನ್ ನೋಡಿ ನಕ್ಕಿದ್ದರು. ಅದು ಶಶಿಕಲಾ ಕಣ್ಣು ಕೆಂಪಾಗುವಂತೆ ಮಾಡಿತ್ತು. ಆ ಕಾರಣಕ್ಕಾಗಿ ಶಶಿಕಲಾ ರಾಜಿನಾಮೆ ಕೇಳಿದ್ದಾರೆ ಎನ್ನಲಾಗಿದೆ. ಅದಕ್ಕೆ ಪ್ರತಿಯಾಗಿ ಬೇರೆಯವರನ್ನು ನೋಡಿ ಸೌಹಾರ್ದಯುತವಾಗಿ ನಗುವುದು ಪ್ರಾಣಿಗಳಿಂದ ಮನುಷ್ಯರನ್ನು ಬೇರೆ ಮಾಡುತ್ತದೆ ಎಂದು ಪನ್ನೀರ್ ಸೆಲ್ವಂ ಸಮರ್ಥಿಸಿಕೊಂಡಿದ್ದರು. ಇಂದು ಅದೇ ವಿಚಾರವನ್ನು ಸ್ಟಾಲಿನ್ ಪ್ರಸ್ತಾಪಿಸಿ, ಪಳನೀಸ್ವಾಮಿ ಸರ್ಕಾರವು ಜನವಿರೋಧಿಯಾಗಿದ್ದು, ಶಶಿಕಲಾ ಹಾಗೂ ಪಳನೀಸ್ವಾಮಿ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.