ಮತ್ತೋರ್ವ ಪತ್ರಕರ್ತನ ಹತ್ಯೆ: ಗುಂಡಿನ ದಾಳಿಯಲ್ಲಿ ಹಿರಿಯ ಸಂಪಾದಕ ಸಾವು..!

Published : Jun 14, 2018, 08:43 PM IST
ಮತ್ತೋರ್ವ ಪತ್ರಕರ್ತನ ಹತ್ಯೆ: ಗುಂಡಿನ ದಾಳಿಯಲ್ಲಿ ಹಿರಿಯ ಸಂಪಾದಕ ಸಾವು..!

ಸಾರಾಂಶ

ರೈಸಿಂಗ್ ಕಾಶ್ಮೀರ್ಪತ್ರಿಕೆಯ ಸಂಪಾದಕನ ಹತ್ಯೆ ಗುಂಡಿಟ್ಟು ಶುಜಾತ್ ಬುಖಾರಿ ಅವರ ಹತ್ಯೆ ಶ್ರೀನಗರದಲ್ಲಿ ನಡೆದ ಘಟನೆ ಕಚೇರಿಯಿಂದ ಹೊರ ಬರುತ್ತಿದ್ದಂತೇ ಗುಂಡಿನ ದಾಳಿ ಆಸ್ಪತ್ರೆ ಸಾಗಿಸುವ ಮಧ್ಯೆಯೇ ಕೊನೆಯುಸಿರೆಳೆದ ಬುಖಾರಿ

ಶ್ರೀನಗರ(ಜೂ.14): ರೈಸಿಂಗ್ ಕಾಶ್ಮೀರ್ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಅವರನ್ನು ಶ್ರೀನಗರದಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಶುಜಾತ್ ಬುಖಾರಿ ಇಂದು ಇಫ್ತಾರ್ ಕೂಟದಲ್ಲಿ ಪಾಲ್ಗೊಳ್ಳಲು ಕಚೇರಿಯಿಂದ ತೆರಳುತ್ತಿದ್ದಾಗ ಅಪರಿಚಿತ ಬಂದೂಕುಧಾರಿ ಅವರ ಮೇಲೆ ದಾಳಿ ಮಾಡಿದ್ದಾನೆ. ಗುಂಡೇಟಿನಿಂದ ಕುಸಿದು ಬಿದ್ದ ಬುಖಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.

ಹಠಾತ್ತನೆ ನಡೆದ ದಾಳಿಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಬುಖಾರಿ ಅವರ ರಕ್ಷಣೆಗೆ ನೀಯೋಜಿತರಾಗಿದ್ದ ಇಬ್ಬರು ಪೊಲೀಸರಿಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ದಾಳಿಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದ್ದು, ದಾಳಿಕೋರನ ಬಂದನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ, ಶಾ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ
ಕಲಾಂಗೂ ಮುನ್ನ ರಾಷ್ಟ್ರಪತಿ ಹುದ್ದೆಗೆ ವಾಜಪೇಯಿ ಹೆಸರು!