ಕ್ಯಾನ್ಸರ್‌ ಪೀಡಿತ ಶಿಕ್ಷಕಿ ವರ್ಗಕ್ಕೆ ವಿನಾಯಿತಿ ಕೊಟ್ಟ ಶಿಕ್ಷಣ ಸಚಿವರು

Published : Sep 11, 2019, 08:45 AM IST
ಕ್ಯಾನ್ಸರ್‌ ಪೀಡಿತ ಶಿಕ್ಷಕಿ ವರ್ಗಕ್ಕೆ ವಿನಾಯಿತಿ ಕೊಟ್ಟ ಶಿಕ್ಷಣ ಸಚಿವರು

ಸಾರಾಂಶ

ಕ್ಯಾನ್ಸರ್ ಪೀಡಿತ ಶಿಕ್ಷಕಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರು [ಸೆ.11] :  ಕ್ಯಾನ್ಸರ್‌ ಕಾಯಿಲೆ ಇದ್ದರೂ ತಾಂತ್ರಿಕ ಕಾರಣದಿಂದ ವರ್ಗಾವಣೆಯಿಂದ ವಿನಾಯಿತಿ ನೀಡದ ಶಿಕ್ಷಕಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ವಿನಾಯಿತಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರು ದಕ್ಷಿಣ ವಲಯದ ಎಳ್ಕುಂಟೆ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕಿ ಮಹೇಶ್ವರಿ ಅವರು ಕ್ಯಾನ್ಸರ್‌ ಪೀಡಿತರಾಗಿದ್ದು, ಇವರಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಿಲ್ಲವೆಂದು ಅವರ ಮಕ್ಕಳು ಶಿಕ್ಷಣ ಇಲಾಖೆಯ ಕ್ರಮವನ್ನು ಖಂಡಿಸಿದ್ದರು. ಇದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದ್ದಲ್ಲದೆ ಮಾಧ್ಯಮಗಳಲ್ಲೂ ವರದಿಯಾಗಿ ಸಚಿವರ ಗಮನಕ್ಕೂ ಬಂದಿತ್ತು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಚಿವರು ಶಿಕ್ಷಣ ಇಲಾಖೆಗೆ ಕರೆ ಮಾಡಿ ವಿನಾಯಿತಿ ನೀಡುವಂತೆ ತಿಳಿಸಿ ಅವರು ಕೆಲಸ ನಿರ್ವಹಿಸುತ್ತಿದ್ದ ಸ್ಥಳದಲ್ಲೇ ಮುಂದುವರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೆ, ಮಾನವೀಯ ದೃಷ್ಟಿಯಿಂದ ನೋಡದ ಕಾನೂನನ್ನು ಕೂಡಲೇ ಬದಲಾಯಿಸಲು ಶೀಘ್ರದಲ್ಲೇ ಸಭೆ ನಡೆಸುತ್ತೇನೆ. ಆ ಮೂಲಕ ನಿಯಮಕ್ಕೆ ತಿದ್ದುಪಡಿ ತಂದು ಎಲ್ಲರಿಗೂ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಮಹೇಶ್ವರಿ ಅವರು ತಮಿಳುನಾಡಿನ ಮಧುರೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೋಮವಾರ ಬಸವನಗುಡಿ ಟಿನ್‌ ಶಾಲೆಯಲ್ಲಿ ನಡೆಯುತ್ತಿದ್ದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲು ತಮ್ಮ ಮಗಳ ಜತೆ ಆಗಮಿಸಿದ್ದರು. ತಾಂತ್ರಿಕ ಕಾರಣಗಳ ನೆಪವೊಡ್ಡಿ ಇವರಿಗೆ ವಿನಾಯಿತಿ ನೀಡಿಲ್ಲವೆಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?