
ನಾಗಮಂಗಲ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಯಲ್ಲಿ ನಾಗಮಂಗಲದಲ್ಲಿ ಕುಮಾರ ಪರ್ವ ಕಾರ್ಯಕ್ರಮಕ್ಕೆ ಬಳಸಿದ್ದ ಜೆಸಿಬಿ ಹಾಗೂ ಕ್ರೇನ್’ನ್ನು ವಶಕ್ಕೆ ಪಡೆಯಲಾಗಿದೆ. 11 ಜೆಸಿಬಿ ಹಾಗೂ 1 ಕ್ರೇನ್’ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾ.30ರಂದು ನಾಗಮಂಗಲದಲ್ಲಿ ಕುಮಾರ ಪರ್ವ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಸ್ವಾಗತಿಸಿಲು ಜೆಸಿಬಿಗಳಲ್ಲಿ ಕುಳಿತು ಕಾರ್ಯಕರ್ತರು ಆಗಮಿಸಿದ್ದರು.
ಕ್ರೇನ್ ಬಳಸಿ ಕುಮಾರಸ್ವಾಮಿಗೆ ಬೃಹತ್ ಸೇಬಿನ ಹಾರವನ್ನು ಹಾಕಿದ್ದರು. ಅನುಮತಿ ಪಡೆಯದೇ ಕ್ರೇನ್ ಹಾಗೂ ಜೆಸಿಬಿ ಬಳಸಿದ ಜೆಡಿಎಸ್ ಮುಖಂಡರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.