
ಬಳ್ಳಾರಿ (ಮಾ. 29): ಚುನಾವಣೆ ಸಮೀಪವಾಗುತ್ತಿದ್ದಂತೆ ಪ್ರಚಾರ ಜೋರಾಗಿದೆ. ಚುನಾವಣಾ ಆಯೋಗ ಪ್ರಚಾರದ ಮೇಲೆ ಕಣ್ಣಿಟ್ಟಿದೆ. ಗಣಿನಾಡು ಬಳ್ಳಾರಿ ಮೇಲೂ ಕಣ್ಣಿಟ್ಟಿದೆ.
ಚುನಾವಣೆಯಲ್ಲಿ ಹಣದ ಹೊಳೆ ಹರಿಸುವ ಕ್ಷೇತ್ರಗಳ ಮೇಲೆ ಆಯೋಗ ಗಮನ ಇಟ್ಟಿದೆ. 224 ಕ್ಷೇತ್ರಗಳ ಪೈಕಿ 61 ಕ್ಷೇತ್ರಗಳ ಮೇಲೆ ಹೆಚ್ಚಿನ ಗಮನ ಇಡಲಾಗಿದೆ. ದುಡ್ಡಿನ ಹೊಳೆ ಹರಿಸುವ 61 ಕ್ಷೇತ್ರಗಳಲ್ಲಿವೆ. ಬಳ್ಳಾರಿಯ ಮೂರು ಕ್ಷೇತ್ರಗಳಾದ ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ, ಹೊಸಪೇಟೆಯಲ್ಲಿ ದುಡ್ಡಿನ ಹೊಳೆ ಹರಿಯುವ ಸಾಧ್ಯತೆ ಇದೆ. ಹಾಗಾಗಿ ಗಣಿ ಉದ್ಯಮಿಗಳ ಮೇಲೆ ಕಣ್ಣಿಡಲಾಗಿದೆ.
ಸಾಮಾನ್ಯವಾಗಿ ಒಂದು ಕ್ಷೇತ್ರಕ್ಕೆ ಒಬ್ಬ ಚುನಾವಣೆ ವೆಚ್ಚ ವೀಕ್ಷಕರ ನೇಮಕ ಆದ್ರೆ, ಬಳ್ಳಾರಿಯ ಮೂರು ಕ್ಷೇತ್ರಗಳಲ್ಲಿ ಹೆಚ್ಚುವರಿಯಾಗಿ ಇಬ್ಬರು ವೀಕ್ಷಕರ ನೇಮಕ ಮಾಡಲಾಗಿದೆ. ಗಣಿ ಉದ್ಯಮಿಗಳಾದ ಗವಿಯಪ್ಪ, ದೀಪಕ್ ಸಿಂಗ್ ಮೇಲೂ ಹೆಚ್ಚಿನ ನಿಗಾ ಇಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.