
ನವದೆಹಲಿ (ಏ. 01): ಹಿಂದೂಗಳು ಬಹುಸಂಖ್ಯಾತರಿರುವ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಪ್ರತಿ ಪಕ್ಷಕ್ಕೆ ಹೆದರಿಕೆಯಿದೆ ಎಂದು ಟೀಕಿಸಿದ್ದ ಮೋದಿ ಅವರ ಹೇಳಿಕೆಯು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇದು ಅಮೇಠಿ ಜೊತೆಗೆ ಮುಸ್ಲಿಂ ಬಾಹುಳ್ಯವಿರುವ ಕೇರಳದ ವಯನಾಡ್ನಲ್ಲಿ ಸ್ಪರ್ಧಿಸಿದ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿ ಮೋದಿ ಈ ಟೀಕೆ ಮಾಡಿದ್ದರು ಎನ್ನಲಾಗಿತ್ತು. ಮಹಾರಾಷ್ಟ್ರದ ವಾರ್ದಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ಮೋದಿ ಅವರು ಈ ಟೀಕೆ ಮಾಡಿದ್ದರು. ಇದರ ವಿರುದ್ಧ ಕಾಂಗ್ರೆಸ್ ಆಯೋಗದ ಮೊರೆ ಹೋಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.