
ಬೆಂಗಳೂರು(ಅ.30): 2018ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಮೀಕ್ಷೆ ನಡೆಸಿದ್ದು, 224 ಕ್ಷೇತ್ರಗಳಲ್ಲಿ ಎರಡನೇ ಬಾರಿ ಸರ್ವೇ ಕಾಂಗ್ರೆಸ್ ಸಮೀಕ್ಷೆ ನಡೆಸಿದೆ. ಎರಡನೇ ಸರ್ವೇಯಲ್ಲೂ ಕಾಂಗ್ರೆಸ್'ಗೆ 80 ರಿಂದ 90 ಸ್ಥಾನ ಪಡೆಯುವ ಸುಳಿವು ಸಮೀಕ್ಷೆಯಿಂದ ಲಭ್ಯವಾಗಿದೆ.
ಮೊದಲನೇ ವರದಿಯಲ್ಲೂ ಹಾಲಿ ಶಾಸಕರ ಸೋಲಿನ ಬಗ್ಗೆ ಸರ್ವೆಯಲ್ಲಿ ಸುಳಿವು ಸಿಕ್ಕಿತ್ತು, ಇದೀಗ ಎರಡನೇ ಸರ್ವೇಯಲ್ಲೂ ಶಾಸಕರ ಭವಿಷ್ಯ ಬದಲಾಗಿಲ್ಲ. ಹೀಗಾಗೇ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಶಾಸಕರನ್ನು ಕರೆದು 'ಕೂಡಲೇ ಎಚ್ಚೆತ್ತುಕೊಳ್ಳಿ, ಎಲ್ಲಿ ತಪ್ಪಾಗಿದೆ ಅದನ್ನು ಸರಿಪಡಿಸಿಕೊಳ್ಳಿ' ಎಂದು ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ತಪ್ಪಿದ್ದಲ್ಲಿ ಪರ್ಯಾಯ ಅಭ್ಯರ್ಥಿ ಕಣಕ್ಕಿಳಿಸುವ ಸುಳಿವನ್ನೂ ನೀಡಿರುವುದಾಗಿ ತಿಳಿದು ಬಂದಿದೆ.
ದೆಹಲಿ ಮೂಲದ ಸಂಸ್ಥೆಯಿಂದ ಕೆಪಿಸಿಸಿ ಈ ಸರ್ವೆ ನಡೆಸಿದೆ. ಇನ್ನು ಸಮೀಕ್ಷೆಯ ಅನುಸಾರ 2018ರ ಚುನಾವಣೆಯಲ್ಲಿ ವಿಧಾನಸಭೆ ಅತಂತ್ರವಾಗುವ ಸುಳಿವೂ ಲಭ್ಯವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.