
ಬೆಂಗಳೂರು, (ಆ.31): ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ.
ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಚುನಾವಣಾ ಆಯೋಗ ಜನರಿಗೆ ಮನವಿ ಮಾಡಿದೆ.
ಸೆಪ್ಟೆಂಬರ್ 1ರಂದು ಈ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು ಸೆಪ್ಟೆಂಬರ್ 30ರ ತನಕ ಇದು ನಡೆಯಲಿದೆ. ಬೂತ್ ಲೆವಲ್ ಅಫೀಸರ್ (ಬಿ.ಎಲ್.ಓ) ಮನೆ-ಮನೆಗೆ ಭೇಟಿ ಮಾಡಲಿದ್ದು, ಮತದಾರರು ಸಂಬಂಧಿಸಿದ ದಾಖಲೆಗಳೊಂದಿಗೆ ಸಿದ್ಧರಾಗಿರಬೇಕು ಎಂದು ಚುನಾವಣಾ ಆಯೋಗ ಮನವಿ ಮಾಡಿಕೊಂಡಿದೆ.
ಸಿದ್ಧವಿರಬೇಕಾದ ದಾಖಲಾತಿಗಳು
ಭಾರತೀಯ ಪಾಸ್ಪೋರ್ಟ್, ಆಧಾರ್ ಕಾರ್ಡ್, ಸರ್ಕಾರಿ/ ಅರೆ ಸರ್ಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ರೈತರ ಗುರುತಿನ ಚೀಟಿ, ಚಾಲನಾ ಪರವಾನಿಗೆ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ಚುನಾವಣಾ ಆಯೋಗ ಅನುಮೋದಿಸಿದ ಯಾವುದಾದರೂ ಇತರ ದಾಖಲೆ.
ಯಾವುದಕ್ಕೆ ಯಾವ-ಯಾವ ಅರ್ಜಿ
ಹೆಸರು/ತಂದೆಯ ಹೆಸರು/ಲಿಂಗ/ಹುಟ್ಟಿದ ದಿನಾಂಕ/ವಿಳಾಸ/ಫೋಟೋ ತಿದ್ದುಪಡಿಗಾಗಿ ನಮೂನೆ 8 ಅರ್ಜಿ ತುಂಬಬೇಕು. ನಮೂನೆ 7ರಲ್ಲಿ ಸ್ಥಳ ಬದಲಾವಣೆ/ಮರಣ. ನಮೂನೆ 6ರಲ್ಲಿ ಸೇರ್ಪಡೆಗಾಗಿ ಹುಟ್ಟಿದ ದಿನಾಂಕ/ವಯಸ್ಸಿನ ದೃಢೀಕರಣ/ವಿಳಾಸ ದೃಢೀಕರಣ/2 ಪಾಸ್ ಪೋರ್ಟ್ ಅಳತೆಯ ಪೋಟೋಗಳು ಅಗತ್ಯವಾಗಿದೆ.
ಹಾಗಿದ್ದರೇ ಇನ್ನೇಕೆ ತಡ ಸೆ.1ರಿಂದ ಸೆ30ರೊಳಿಗೆ ಬಿ. ಎಲ್. ಓಗಳು ನಿಮ್ಮ ಮನೆಗೆ ಬರಹುದು. ಹಾಗಾಗಿ ಮೇಲೆ ತಿಳಿಸಲಾದ ದಾಖಲಾತಿಗಳನ್ನು ರೆಡಿಮಾಡಿ ಇಟ್ಟುಕೊಳ್ಳಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.