ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಇಬ್ಬರು ಕಾರ್ಮಿಕರ ದುರ್ಮರಣ

Published : Feb 23, 2018, 10:37 AM ISTUpdated : Apr 11, 2018, 01:02 PM IST
ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಇಬ್ಬರು ಕಾರ್ಮಿಕರ ದುರ್ಮರಣ

ಸಾರಾಂಶ

ಒಂದೇ ಲೈನಿನ ಎರಡು ಪ್ರತ್ಯೇಕ ವಿದ್ಯುತ್ ಕಂಬಗಳಲ್ಲಿ ಹೊಸ ತಂತಿಗಳನ್ನು ಜೋಡಿಸುತ್ತಿದ್ದ ಇಬ್ಬರು ಗುತ್ತಿಗೆ ಕಾರ್ಮಿಕರು ಏಕಾಏಕಿ ವಿದ್ಯುತ್ ಪ್ರವಹಿಸಿದ್ದರಿಂದ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಬ.ಬಾಗೇವಾಡಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಬಸವನಬಾಗೇವಾಡಿ: ಒಂದೇ ಲೈನಿನ ಎರಡು ಪ್ರತ್ಯೇಕ ವಿದ್ಯುತ್ ಕಂಬಗಳಲ್ಲಿ ಹೊಸ ತಂತಿಗಳನ್ನು ಜೋಡಿಸುತ್ತಿದ್ದ ಇಬ್ಬರು ಗುತ್ತಿಗೆ ಕಾರ್ಮಿಕರು ಏಕಾಏಕಿ ವಿದ್ಯುತ್ ಪ್ರವಹಿಸಿದ್ದರಿಂದ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಬ.ಬಾಗೇವಾಡಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊನ್ನೂರು ಗ್ರಾಮದ ಮಂಜು (18), ತಿಪ್ಪೇಸ್ವಾಮಿ (19) ಮೃತಪಟ್ಟ ಕಾರ್ಮಿಕರು. ಆಂಧ್ರಮೂಲದ ವ್ಯಕ್ತಿಯೊಬ್ಬರು ಕಂಬಗಳಿಗೆ ಹೊಸ ತಂತಿ ಜೋಡಣೆಯ ಗುತ್ತಿಗೆ ಪಡೆದಿದ್ದರು.

ಮಂಜು ಮತ್ತು ತಿಪ್ಪೇಸ್ವಾಮಿ ಇವರ ಕೈಕೆಳಗೆ ಕಳೆದ ಆರು ದಿನಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಒಬ್ಬ ಸರ್ಕಾರಿ ಆಸ್ಪತ್ರೆ ಮುಂಭಾಗ ಮತ್ತು ಇನ್ನೊಬ್ಬ ಅಂಚೆ ಕಚೇರಿ ಮುಂಭಾಗದಲ್ಲಿ ಹೊಸ ತಂತಿ ಅಳವಡಿಸುತ್ತಿದ್ದರು.

ಈ ವೇಳೆ ವಿದ್ಯುತ್ತನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ತಾಲೂಕು ಆಸ್ಪತ್ರೆಯಲ್ಲಿ ಜನರೇಟರ್ ಚಾಲು ಮಾಡಿದ್ದರಿಂದ ರಿವರ್ಸ್ ಕರೆಂಟ್ ತಂತಿಯಲ್ಲಿ ಹರಿದು ಇಬ್ಬರು ಕಾರ್ಮಿಕರು ಕಂಬದಲ್ಲಿಯೇ ಅಸುನೀಗಿದ್ದಾರೆ. ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಮೃತ ದೇಹ ಕೆಳಗಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?