ಇನ್ನುಮುಂದೆ ಅರ್ಜಿ ಸಲ್ಲಿಸಿದ ಒಂದೇ ದಿನದಲ್ಲಿ ಮನೆಗೆ ವಿದ್ಯುತ್

Published : Feb 08, 2018, 10:29 AM ISTUpdated : Apr 11, 2018, 12:53 PM IST
ಇನ್ನುಮುಂದೆ ಅರ್ಜಿ ಸಲ್ಲಿಸಿದ ಒಂದೇ ದಿನದಲ್ಲಿ ಮನೆಗೆ ವಿದ್ಯುತ್

ಸಾರಾಂಶ

ಮಧ್ಯವರ್ತಿಗಳ ಸಹಾಯವಿಲ್ಲದೆ ಆನ್‌ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಿ ವಿದ್ಯುತ್ ಸಂಪರ್ಕ ಪಡೆಯಲು ಅನುಕೂಲವಾಗುವಂತೆ ಇಂಧನ ಇಲಾಖೆ ‘ಸವಿ ಕಿರಣ’ ಎಂಬ ನೂತನ ಫಾಸ್ಟ್‌ಟ್ರ್ಯಾಕ್ ಯೋಜನೆಯನ್ನು ಜಾರಿಗೊಳಿಸಿದೆ.

ಬೆಂಗಳೂರು: ಮಧ್ಯವರ್ತಿಗಳ ಸಹಾಯವಿಲ್ಲದೆ ಆನ್‌ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಿ ವಿದ್ಯುತ್ ಸಂಪರ್ಕ ಪಡೆಯಲು ಅನುಕೂಲವಾಗುವಂತೆ ಇಂಧನ ಇಲಾಖೆ ‘ಸವಿ ಕಿರಣ’ ಎಂಬ ನೂತನ ಫಾಸ್ಟ್‌ಟ್ರ್ಯಾಕ್ ಯೋಜನೆಯನ್ನು ಜಾರಿಗೊಳಿಸಿದೆ. ಸದ್ಯ ಬೆಂಗಳೂರಿನ 49 ಬೆಸ್ಕಾಂ ಉಪ ವಿಭಾಗಗಳಲ್ಲಿ ಸವಿ ಕಿರಣ ಯೋಜನೆ ಜಾರಿಗೆ ತರಲಾಗಿದ್ದು, ಹಂತ ಹಂತವಾಗಿ ರಾಜ್ಯಾದ್ಯಂತ ಯೋಜನೆ ವಿಸ್ತರಣೆಗೆ ಇಲಾಖೆ ನಿರ್ಧರಿಸಿದೆ. ಎಂ.ಜಿ. ರಸ್ತೆಯ ಬೆಸ್ಕಾಂ ಕಚೇರಿಯಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಈ ‘ಸವಿ ಕಿರಣ’ ಆನ್‌ಲೈನ್ ಸೇವೆಗೆ ಬುಧವಾರ ಅಧಿಕೃತ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಗ್ರಾಹಕರು ಹೊಸ ವಿದ್ಯುತ್ ಪಡೆಯಲು ಅಷ್ಟೇ ಅಲ್ಲದೆ, ಹೆಸರು ಬದಲಾವಣೆ, ಬಿಲ್ ಬದಲಾವಣೆಗಳಿಗೂ ಸವಿಕಿರಣ ಸಾಫ್ಟ್ ಟ್ಯಾಕ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ 24 ಗಂಟೆಯೊಳಗೆ ವಿದ್ಯುತ್ ಸಂಪರ್ಕ ಸೇವೆ ಲಭ್ಯವಾಗಲಿದೆ. 7.5 ಕಿಲೋ ವ್ಯಾಟ್ ಗೃಹ ಬಳಕೆಯ ಮತ್ತು ವಾಣಿಜ್ಯ ಬಳಕೆಯ ಗ್ರಾಹಕರು ‘ಸವಿ ಕಿರಣ’ ಯೋಜನೆಯ ಸೌಲಭ್ಯ ಪಡೆಯ ಬಹುದು ಎಂದು ವಿವರಿಸಿದರು.

ಈ ಯೋಜನೆ ಪ್ರಕಾರ ವಿದ್ಯುತ್ ಸಂಪರ್ಕ ಪಡೆಯಲು ಈ ವರೆಗೆ ಆಫ್‌ಲೈನ್ ಅರ್ಜಿ ಮೂಲಕ ಹೆಸರು, ವಿಳಾಸ ಹಾಗೂ ಇತರೆ ಮಾಹಿತಿ ದಾಖಲೆಗಳನ್ನು ನೀಡುತ್ತಿದ್ದಂತೆ ಇನ್ಮುಂದೆ ಎಲ್ಲ ಮಾಹಿತಿ, ದಾಖಲೆಗಳನ್ನು ಆನ್‌ಲೈನ್ ಮೂಲಕವೇ ನೀಡಿದರೆ ಒಂದೇ ದಿನದಲ್ಲಿ ವಿದ್ಯುತ್ ಸಂಪರ್ಕ ಸೇವೆ ದೊರೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಶಾಸಕ ಎನ್.ಎ. ಹ್ಯಾರಿಸ್, ಇಂಧನ ಇಲಾಖೆಯ ಅಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ರಾಜ್ಯದ ಮೊದಲ ಬ್ರೈಲ್ ಗ್ರಂಥಾಲಯ ಆರಂಭ
Bengaluru: ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ 23ರ ಹರೆಯದ ಕೇರಳ ಯುವಕನ ಬಂಧನ