
ಬೆಂಗಳೂರು, [ಮೇ.16]: ರಾಜ್ಯದ ಜನರಿಗೆ ಕೆಇಆರ್ಸಿ (ಕರ್ನಾಟಕ ಎಲೆಕ್ಟ್ರಾನಿಕ್ ರೆಗ್ಯುಲೇಟರಿ ಕಮಿಷನ್) ಶಾಕ್ ನೀಡಲಿದೆ. ಜೂನ್ 1ರಿಂದ ವಿದ್ಯುತ್ ದರ ಪ್ರತಿ ಯೂನಿಟ್ಗೆ 45-50 ಪೈಸೆ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ರಾಜ್ಯ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಹೆಚ್ಚಿಸುವಂತೆ ಕೆಇಆರ್ಸಿ ಗೆ ಪ್ರಸ್ತಾವನೆ ಸಲ್ಲಿಸಿದ್ದವು. ಅಲ್ಲದೇ, ಪ್ರತೀ ವರ್ಷ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ ಆಗುತ್ತಿತ್ತು. ಆದ್ರೆ ಈ ಬಾರಿ ಲೋಕಸಭೆ ಚುನಾವಣೆ ಎದುರಾಗಿದ್ದರಿಂದ ವಿದ್ಯುತ್ ದರ ಹೆಚ್ಚಳ ಆಗಿರಲಿಲ್ಲ.
ಇದೀಗ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ನಿಗಮ ಮಂಡಳಿ ದರ ಏರಿಕೆ ಬಗ್ಗೆ ಸಿಎಂಗೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ವರ್ಷ ಎರಡು ಬಾರಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿತ್ತು. ಮೊದಲಿಗೆ ಮೇ ತಿಂಗಳಿನಲ್ಲಿ ಯೂನಿಟ್ ಒಂದಕ್ಕೆ 38 ಪೈಸೆ ಹೆಚ್ಚಳ ಮಾಡಿದ್ದರೆ, ಅಕ್ಟೋಬರ್ ವೇಳೆಗೆ 14 ಪೈಸೆ ಹೆಚ್ಚಳ ಮಾಡಲಾಗಿತ್ತು.
ವಿದ್ಯುತ್ ದರ ಏರಿಕೆಯಾದ್ರೂ ಸಹ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೂರುವ ಸಾಧ್ಯತೆಗಳಿವೆ. ಯಾಕಂದ್ರೆ ಸರಿಯಾದ ಸಮಯಕ್ಕೆ ಮಳೆ ಇಲ್ಲದ ಕಾರಣ ಕರ್ನಾಟಕದಲ್ಲಿ ಜಲಾಶಯಗಳು ನಿಧಾನಕ್ಕೆ ಬರಿದಾಗುತ್ತಿವೆ.
ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.