ಚಿಕಿತ್ಸೆ ಫಲಕಾರಿಯಾಗದೇ ಕಾಡಾನೆ ಸಾವು

Published : Apr 29, 2018, 01:52 PM IST
ಚಿಕಿತ್ಸೆ ಫಲಕಾರಿಯಾಗದೇ ಕಾಡಾನೆ ಸಾವು

ಸಾರಾಂಶ

ಸೋಮವಾರಪೇಟೆ ತಾಲ್ಲೂಕಿನ ದುಬಾರೆ ಮೀಸಲು ಅರಣ್ಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾಡಾನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. 

 ಕೊಡಗು (ಏ. 29): ಸೋಮವಾರಪೇಟೆ ತಾಲ್ಲೂಕಿನ ದುಬಾರೆ ಮೀಸಲು ಅರಣ್ಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾಡಾನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. 

ಗುಂಡೇಟಿನಿಂದ ಗಾಯಗೊಂಡು ಕಳೆದ ಒಂದೂವರೆ ತಿಂಗಳಿನಿಂದ ಗಂಡಾನೆ ನಿತ್ರಾಣಗೊಂಡಿತ್ತು.  ಕಾಲಿಗೆ ಗಂಭೀರವಾಗಿ ಗಾಯಗೊಂಡು ಕುಂಟುತ್ತಿತ್ತು. ವನ್ಯಜೀವಿ ವೈದ್ಯಾಧಿಕಾರಿ ಮುಜೀಬ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದುಬಾರೆ ಸಾಕಾನೆ ಶಿಬಿರದ ಸಾಕಾನೆಗಳ ಸಹಕಾರದಿಂದ ಚಿಕಿತ್ಸೆ ನಡೆದಿತ್ತು. ಕಿವಿ, ಬೆನ್ನಿನಲ್ಲಿ ಗುಂಡಿನ ಗುರುತು, ಸೊಂಡಿಲಿನಲ್ಲಿ ಸೋಲಾರ್ ವಿದ್ಯುತ್ ಶಾಕ್ ಗುರುತು ಪತ್ತೆಯಾಗಿದೆ.  

ಗಂಭೀರ ಗಾಯಗಳಿಂದ ನಿತ್ರಾಣಗೊಂಡಿದ್ದರಿಂದ ಕಾಡಾನೆ ಸಾವನ್ನಪ್ಪಿದೆ. ಸ್ಥಳಕ್ಕೆ  ಹಿರಿಯ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ ಮುಸ್ಲಿಂ: ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!