ಡಿ.15ರೊಳಗೆ ಎಲ್ಲ ಅರ್ಹರಿಗೆ ಅನಿಲಭಾಗ್ಯ: ಸಚಿವ ಪ್ರಮೋದ್

Published : Nov 11, 2017, 04:56 PM ISTUpdated : Apr 11, 2018, 01:11 PM IST
ಡಿ.15ರೊಳಗೆ ಎಲ್ಲ ಅರ್ಹರಿಗೆ ಅನಿಲಭಾಗ್ಯ: ಸಚಿವ ಪ್ರಮೋದ್

ಸಾರಾಂಶ

ರಾಜ್ಯ ಸರ್ಕಾರದ ಜನಪರ ಯೋಜನೆ ‘ಮುಖ್ಯಮಂತ್ರಿ ಅನಿಲಭಾಗ್ಯ’ದ ಅರ್ಹ ಫಲಾನುಭವಿಗಳ ಪಟ್ಟಿಯನ್ನು ನ.20ರೊಳಗೆ ಅಂತಿಮಪಡಿಸಿ, ಎಲ್ಲ ಫಲಾನುಭವಿಗಳಿಗೆ ಡಿ.15ರೊಳಗೆ ಅನಿಲ ಸಂಪರ್ಕವನ್ನು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿ: ರಾಜ್ಯ ಸರ್ಕಾರದ ಜನಪರ ಯೋಜನೆ ‘ಮುಖ್ಯಮಂತ್ರಿ ಅನಿಲಭಾಗ್ಯ’ದ ಅರ್ಹ ಫಲಾನುಭವಿಗಳ ಪಟ್ಟಿಯನ್ನು ನ.20ರೊಳಗೆ ಅಂತಿಮಪಡಿಸಿ, ಎಲ್ಲ ಫಲಾನುಭವಿಗಳಿಗೆ ಡಿ.15ರೊಳಗೆ ಅನಿಲ ಸಂಪರ್ಕವನ್ನು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಬಡವರಿಗಾಗಿ ರೂಪಿಸಿರುವ ಇನ್ನೊಂದು ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಪ್ರತಿ ಫಲಾನುಭವಿಗೆ 4040 ರು. ಮೌಲ್ಯದ ಅನಿಲ ಸಂಪರ್ಕ ದೊರೆಯಲಿದೆ. ಹಾಗಾಗಿ ಅರ್ಹರಿಗೆ ಈ ಯೋಜನೆಯನ್ನು ತಲುಪಿಸಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯವನ್ನು ಪರಿಸರ ಸ್ನೇಹಿಯನ್ನಾಗಿ ಮಾಡಲು ಆಹಾರ ಇಲಾಖೆ, ಕಾರ್ಮಿಕ ಇಲಾಖೆ, ಅರಣ್ಯ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಿಂದ ಒಟ್ಟು 34763 ಮನೆಗಳಲ್ಲಿ, ಪ್ರಥಮ ಹಂತದಲ್ಲಿ 11,059 ಮನೆಗಳ ಪಟ್ಟಿಯನ್ನು ತಯಾರಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ 3484, ಕುಂದಾಪುರದಲ್ಲಿ 2245, ಉಡುಪಿಯಲ್ಲಿ 874, ಕಾಪುವಿನಲ್ಲಿ 1563, ಕಾರ್ಕಳದಲ್ಲಿ 2893 ಫಲಾನುಭವಿಗಳ ಗುರಿ ನಿಗದಿ ಪಡಿಸಲಾಗಿದೆ ಎಂದವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧ, ಜಿ.ಪಂ. ಸದಸ್ಯರಾದ ಜನಾರ್ದನ ತೋನ್ಸೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಎಂ.ಆರ್. ಭಟ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿಗೆ ಸಮಾಧಿ ತೋಡುತ್ತೇವೆ: ಕಾಂಗ್ರೆಸ್ ವೋಟ್ ಚೋರಿ ಸಮಾವೇಶದಲ್ಲಿ ಕಾರ್ಯಕರ್ತರ ಘೋಷಣೆ
'ಇದಪ್ಪಾ ಕಾನ್ಪಿಡೆನ್ಸ್‌ ಅಂದ್ರೆ..' ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಬರೋ ಮುನ್ನವೇ 12 ಸಾವಿರ ಲಡ್ಡು ಮಾಡಿಸಿಟ್ಟ ಸ್ಪರ್ಧಿ!