ಗುಂಪು ಹಲ್ಲೆ ತಡೆಯಿರಿ: ಪ್ರಧಾನಿ ಮೋದಿಗೆ 49 ಗಣ್ಯರ ಪತ್ರ ಓದಿರಿ!

Published : Jul 24, 2019, 04:18 PM IST
ಗುಂಪು ಹಲ್ಲೆ ತಡೆಯಿರಿ: ಪ್ರಧಾನಿ ಮೋದಿಗೆ 49 ಗಣ್ಯರ ಪತ್ರ ಓದಿರಿ!

ಸಾರಾಂಶ

ದೇಶದಲ್ಲಿ ಹೆಚ್ಚುತ್ತಿರುವ ಗುಂಪು ಹಲ್ಲೆ ಪ್ರಕರಣಗಳು| 49 ಗಣ್ಯ ವ್ಯಕ್ತಿಗಳಿಂದ ಪ್ರಧಾನಿ ಮೋದಿಗೆ ಪತ್ರ| ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಕಾನೂನು ಜಾರಿಗೆ ಆಗ್ರಹ| ವಿವಿಧ ಕ್ಷೇತ್ರಗಳ 49 ಗಣ್ಯರು ಸಹಿ ಮಾಡಿರುವ ಪತ್ರ ಪ್ರಧಾನಿ ಮೋದಿಗೆ ರವಾನೆ|

ನವದೆಹಲಿ(ಜು.24): ದೇಶದಲ್ಲಿ ನಡೆಯುತ್ತಿರುವ ಗುಂಪು ಹಲ್ಲೆಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ವಿವಿಧ ಕ್ಷೇತ್ರಗಳ 49 ಗಣ್ಯ ವ್ಯಕ್ತಿಗಳು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ದೇಶದಲ್ಲಿ ಒಂದು ಕೋಮಿನ ಜನರನ್ನು ಗುರಿಯಾಗಿಸಿಕೊಂಡು ಗುಂಪು ಹಲ್ಲೆಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವುದು ಇಂದಿನ ತುರ್ತು ಅಗತ್ಯ ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಪ್ರಧಾನಿ ಮೋದಿ ಅವರಿಗೆ ಬರದಿರುವ ಪತ್ರದಲ್ಲಿ ಪ್ರಮುಖವಾಗಿ ಚಿಂತಕ ರಾಮಚಂದ್ರ ಗುಹಾ, ಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್, ಗಾಯಕಿ ಶುಭಾ ಮುದ್ಗಲ್, ನಟಿ ಕೊಂಕಣಾ ಸೇನ್ ಶರ್ಮಾ, ಅನುರಾಗ್ ಕಶ್ಯಪ್, ಹಾಗೂ ಮಣಿರತ್ನಂ ಸೇರಿದಂತೆ ಒಟ್ಟು 49 ಗಣ್ಯ ವ್ಯಕ್ತಿಗಳು ಸಹಿ ಮಾಡಿದ್ದಾರೆ.

ಗುಂಪು ಹಲ್ಲೆಗಳನ್ನು ಮಾಡುವವರ ವಿರುದ್ಧ ತುರ್ತು ಕಠಿಣ ಕ್ರಮ ಕೈಗೊಳ್ಳಲು ಅನುವಾಗುವಂತೆ ಅಗತ್ಯ ಕಾನೂನು ರೂಪಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಬೀದಿ ನಾಯಿಗಳಿಗೆ ಪ್ರತಿನಿತ್ಯ 2 ಬಾರಿ ಚಿಕನ್‌ ರೈಸ್‌ !
ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!