
ಬೆಂಗಳೂರು(ಮಾ. 23): ನಾಲ್ಕು ದಿನಗಳ ನಂತರ ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ನಿಂತಿದೆ. ಸಿಎಂ ನೇತೃತ್ವದಲ್ಲಿ ನಡೆದ ಮತ್ತೊಂದು ಸಂಧಾನ ಸಭೆ ಯಶಸ್ವಿಯಾಗಿದೆ. ಸಂಧಾನಸಭೆ ತಮಗೆ ತೃಪ್ತಿ ತಂದಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಇಂದು ಸಂಜೆ ತಿಳಿಸಿದ್ದಾರೆ. ಮುಷ್ಕರವನ್ನು ಕೈಬಿಡಲಾಗಿದೆ ಎಂದು ಘೋಷಿಸಿದ್ದಾರೆ.
ನಿನ್ನೆ ಕೂಡ ಸಿಎಂ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿತ್ತು. ಆದರೆ, ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರ ಮುಂದುವರಿಸಲು ನಿರ್ಧರಿಸಿದ್ದರು. ಇಂದು ಮತ್ತೊಂದು ಸುತ್ತಿನ ಸಭೆ ಎರಡು ಗಂಟೆ ಕಾಲ ನಡೆಯಿತು. ಏಪ್ರಿಲ್ 10ರಂದು ಸಚಿವೆ ಉಮಾಶ್ರೀ ಅವರು ಮತ್ತೊಂದು ಸಂಧಾನ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಎಲ್ಲಾ ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ. ಒಂದು ವೇಳೆ, ಆ ಸಭೆಯಲ್ಲಿ ತಮಗೆ ತೃಪ್ತಿಕರವಾದ ಫಲಿತಾಂಶ ಬರಲಿಲ್ಲವೆಂದರೆ ಸಿಎಂ ನಿವಾಸಕ್ಕೆ ಲಗ್ಗೆ ಹಾಕುವುದಾಗಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಕಾರ್ಯಾಧ್ಯಕ್ಷೆ ವರಲಕ್ಷ್ಮೀ ಎಚ್ಚರಿಕೆ ನೀಡಿದ್ದಾರೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ 10 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್'ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನ, ನೀರು, ಶೌಚಕ್ಕೆ ತಾಪತ್ರಯವಿದ್ದರೂ ಲೆಕ್ಕಿಸದೆ ಸಾವಿರಾರು ಕಾರ್ಯಕರ್ತೆಯರು ಮುಷ್ಕರ ನಿರತರಾಗಿದ್ದು ಗಮನಾರ್ಹ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.