
ಬೆಂಗಳೂರು(ನ.19): ಪ್ರೊಫೆಸರ್ ಕಿರುಕುಳ ತಾಳಲಾರದೆ ನರ್ಸ್ ಒಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಮೆಡಿಕಲ್-ಸಂಶೋಧನಾ ಕಾಲೇಜ್ನ ನರ್ಸ್ ಮಮತಾ ಆತ್ಮಹತ್ಯೆಗೆ ಯತ್ನಿಸಿರುವ ನರ್ಸ್. ನನ್ನ ಸಾವಿಗೆ BMRCI ನಲ್ಲಿ ಕೆಲಸ ಮಾಡುತ್ತಿರುವ ಪ್ರೊಫೆಸರ್ ಹೇಮಾವತಿಯವರೇ ಅವರೇ ಕಾರಣ ಎಂದು ಬರೆದಿಟ್ಟು ಆತ್ಮಹತ್ಯೆ ಯತ್ನಿಸಿದ್ದಾರೆ.
ಕೆಲ ದಿನಗಳ ಹಿಂದೆ ಪ್ರೊಫೆಸರ್ ಹೇಮಾವತಿ ಮಮತಾರನ್ನು ವಿದ್ಯಾರ್ಥಿಗಳ ಮುಂದೆ ನಿಂಧಿಸಿದ್ದರಂತೆ. ಇಷ್ಟೇ ಅಲ್ಲದೆ ನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಸದ್ಯ ತೀವ್ರ ಅಸ್ವಸ್ಥಗೊಂಡಿರುವ ಮಮತಾರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಮತಾ ಪತಿಯೂ ಕೂಡ ಪೊಲೀಸರಿಗೆ ಪತ್ರ ಬರೆದಿದ್ದು, ಪ್ರೊಫೆಸರ್ ಹೇಮಾವತಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.