
ಇಸ್ಲಾಮಾಬಾದ್[ಮೇ.27]: ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೂಡಿ ಕೆಲಸ ಮಾಡುವ ಇಂಗಿತವನ್ನು ಇಮ್ರಾನ್ ಖಾನ್ ವ್ಯಕ್ತಪಡಿಸಿದ್ದಾರೆ.
ದೂರವಾಣಿ ಕರೆ ಮಾಡಿ ಶುಭ ಕೋರಿದ್ದಕ್ಕೆ ಇಮ್ರಾನ್ಗೆ ಧನ್ಯವಾದ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ‘ಹಿಂಸಾಚಾರ ಹಾಗೂ ಭಯೋತ್ಪಾದನೆ ಮುಕ್ತ ವಾತಾವರಣ ಹಾಗೂ ಭರವಸೆ ಮರು ಸ್ಥಾಪನೆಯು ಉಭಯ ರಾಷ್ಟ್ರಗಳ ಶಾಂತಿ ಹಾಗೂ ಅಭಿವೃದ್ಧಿಗಳ ಮೂಲ ಮಂತ್ರವಾಗಿವೆ’ ಎಂದು ಇಮ್ರಾನ್ಗೆ ಸಂದೇಶ ನೀಡಿದ್ದಾರೆ.
ಈ ಮೂಲಕ ಭಯೋತ್ಪಾದನೆಗೆ ಕಡಿವಾಣ ಹಾಕುವ ಮೂಲಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪಾಕಿಸ್ತಾನ ಕೆಲಸ ಮಾಡಬೇಕೆಂಬ ಸೂಚ್ಯ ಸಂದೇಶವನ್ನು ಮೋದಿ ಅವರು ದೂರವಾಣಿ ಮೂಲಕವೇ ರವಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.