
ನವದೆಹಲಿ(ಮೇ.18): ಕೇಂದ್ರ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಅನಿಲ್ ಮಾಧವ್ ದಾವೆ ನಿಧನ ಹೊಂದಿದ್ದಾರೆ. ಸಚಿವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಇತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
2009ರಿಂದ ರಾಜ್ಯಸಭಾ ಸಚಿವರಾಗಿರುವ ಮಧ್ಯಪ್ರದೇಶದ ಬರ್ನಾಗಲ್ ಮೂಲದ ಅನಿಲ್ ದಾವೆ ಮೋದಿ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಮುಂಜಾನೆ ಅವರು ಅಕಾಲಿಕ ಮರಣಕ್ಕೀಡಾಗಿದ್ದಾರೆ.
ಸಚಿವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ 'ಸಂಜೆಯಷ್ಟೇ ಮಾತುಕತೆ ನಡೆಸಿದ್ದೆ. ಅವರ ಸಾವಿನ ಸುದ್ದಿ ನಿಜಕ್ಕೂ ಶಾಕ್ ನೀಡಿದಂತಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.