
ಚೆನ್ನೈ (ಫೆ.17): ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರನ್ನು ಭೇಟಿ ಮಾಡದೇ ಇರಲು ತಮಿಳುನಾಡು ನೂತನ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ನಿರ್ಧಾರಿಸಿದ್ದಾರೆಂದು ತಿಳಿದು ಬಂದಿದೆ.
ನಿನ್ನೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪಳನಿಸ್ವಾಮಿ ಇಂದು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡುವರಿದ್ದರು.
ಕಾನೂನು ತಜ್ಞರ ಸಲಹೆಯ ಮೇರೆಗೆ ಪಳನಿಸ್ವಾಮಿ ಭೇಟಿ ಕಾರ್ಯಕ್ರಮಲ್ಲಿ ರದ್ದು ಪಡಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮುಖ್ಯಮಂತ್ರಿ ಅಪರಾಧಿಯೋರ್ವರನ್ನು ಜೈಲಿಗೆ ತೆರಳಿ ಭೇಟಿ ಮಾಡುವುದು ತಪ್ಪು ಎಂಬ ಕಾನೂನು ಸಲಹೆ ಕಾರಣದಿಂದಾಗಿ ಶಶಿಕಲಾ ಭೇಟಿ ಮಾಡದೇ ಇರಲು ಪಳನಿಸ್ವಾಮಿ ನಿರ್ಧಾರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.