ಅನಿಲ್‌ ಅಂಬಾನಿಗೆ ಸಂಕಷ್ಟ : ಜೈಲಿಗೆ ಹಾಕಲು ಮನವಿ

Published : Jan 05, 2019, 09:12 AM IST
ಅನಿಲ್‌ ಅಂಬಾನಿಗೆ ಸಂಕಷ್ಟ : ಜೈಲಿಗೆ ಹಾಕಲು ಮನವಿ

ಸಾರಾಂಶ

ಉದ್ಯಮಿ ಅನಿಲ್‌ ಅಂಬಾನಿ ಅವರನ್ನು ಬಂಧಿಸುವಂತೆ ಕೋರಿ ಸ್ವೀಡನ್‌ ಮೂಲದ ಟೆಲಿ ಕಮ್ಯೂನಿಕೇಷನ್ಸ್‌ ಸಂಸ್ಥೆಯಾದ ಎರಿಕ್ಸನ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ಮುಂಬೈ: ತನಗೆ ನೀಡಬೇಕಿರುವ 550 ಕೋಟಿ ರು. ಬಾಕಿ ಪಾವತಿಸದೇ ನ್ಯಾಯಾಂಗ ನಿಂದನೆ ಮಾಡಿರುವ ಉದ್ಯಮಿ ಅನಿಲ್‌ ಅಂಬಾನಿ ಅವರನ್ನು ಬಂಧಿಸುವಂತೆ ಕೋರಿ ಸ್ವೀಡನ್‌ ಮೂಲದ ಟೆಲಿ ಕಮ್ಯೂನಿಕೇಷನ್ಸ್‌ ಸಂಸ್ಥೆಯಾದ ಎರಿಕ್ಸನ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ಎರಿಕ್ಸನ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅನಿಲ್‌ ಖೇರ್‌, ‘ಅನಿಲ್‌ ಅಂಬಾನಿ ಅವರಿಂದ ಬರಬೇಕಿರುವ ಬಾಕಿಗಾಗಿ ದೀರ್ಘಕಾಲದಿಂದ ಕಾಯುತ್ತಿದ್ದೇವೆ. ಆದರೆ, ರಿಲಯನ್ಸ್‌ ಕಮ್ಯೂನಿಕೇಷನ್ಸ್‌ ಮತ್ತು ಇತರರು ಸುಪ್ರೀಂ ಆದೇಶ ಪಾಲನೆ ಮಾಡದೆ, ನ್ಯಾಯಾಂಗ ನಿಂದನೆ ಮಾಡಿದ್ದಾರೆ,’ ಎಂದು ಸುಪ್ರೀಂ ಕೋರ್ಟ್‌ಗೆ ಹೇಳಿದರು. ಆದಾಗ್ಯೂ, ಈ ಕುರಿತಾದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರಕ್ಕೆ ಮುಂದೂಡಿದೆ.

ಎರಿಕ್ಸನ್‌ ಸಂಸ್ಥೆಗೆ ನೀಡಬೇಕಿರುವ 550 ಕೋಟಿ ರು. ಬಾಕಿಗೆ ಸಂಬಂಧಿಸಿದಂತೆ ರಿಲಯನ್ಸ್‌ ಕಮ್ಯೂನಿಕೇಷನ್ಸ್‌ ಅಧ್ಯಕ್ಷ ಅನಿಲ್‌ ಅಂಬಾನಿ ಅವರು ವೈಯಕ್ತಿಕ ಗ್ಯಾರೆಂಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಈ ಬಾಕಿ ಮೊತ್ತವನ್ನು ಪಾವತಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಬೇಕು. ಜೊತೆಗೆ ಅವರು ದೇಶ ಬಿಟ್ಟು ಪರಾರಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ, ಬಾಕಿ ಪಾವತಿಸಲು ವಿಫಲವಾದಲ್ಲಿ ಅನಿಲ್‌ ಅಂಬಾನಿ ಅವರನ್ನು ಬಂಧಿಸಬೇಕು ಎಂದು ಎರಿಕ್ಸನ್‌ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ