
ಬೆಂಗಳೂರು : ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಕಲಹ ಇದೀಗ ಮಿತಿ ಮೀರಿದ್ದು ಶುಕ್ರವಾರ ನಡೆಯುವ ಪಿಎಲ್ ಡಿ ಬ್ಯಾಂಕ್ ಚುನಾವಣೆ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ.
ಇದೀಗ ಇವರ ನಡುವಿನ ಕಲಹವನ್ನು ತಣ್ಣಗಾಗಿಸಲು ಸಿದ್ದರಾಮಯ್ಯ ಸಲಹೆ ನೀಡಿದ್ದು ಸಂಧಾನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಮಧ್ಯ ಪ್ರವೇಶಿಸುವಂತೆ ಸೂಚಿಸಿದ್ದಾರೆ.
ಸಂಧಾನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರವೇಶಿಸಲು ತಿಳಿಸಿದ್ದು, ಈ ಬಗ್ಗೆ ಸಿದ್ದರಾಮಯ್ಯ ಜೊತೆ ಖಂಡ್ರೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯಗೆ ಜಾರಕಿಹೊಳಿ ಬ್ರದರ್ಸ್ ಹಾಗೂ ಹೆಬ್ಬಾಳ್ಕರ್ ಫೈಟ್ ಬಗ್ಗೆ ಖಂಡ್ರೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಸತೀಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸುವಂತೆ ಸಿದ್ದರಾಮಯ್ಯಗೆ ಖಂಡ್ರೆ ಮನವಿ ಮಾಡಿದ್ದಾರೆ. ಎರಡೂ ಬಣಕ್ಕೆ ಒಪ್ಪಿಗೆಯಾಗುವರನ್ನ ಅಧ್ಯಕ್ಷರನ್ನಾಗಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.